ಪಿಕ್ಅಪ್ ವಾಹನದ ಚಾಲಕ ಅಬ್ದುಲ್ ರಹೀಂ ಹತ್ಯೆ ಸೂತ್ರಧಾರ ಭರತ್ ಕುಮ್ಡೇಲ್ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24 ಗಂಟೆಯ ಒಳಗಡೆ ಬಂಧಿಸಬೇಕು. ಇಲ್ಲದಿದ್ದರೆ ಎಸ್ಪಿ ಕಚೇರಿ ಚಲೋ ಸಹಿತ ದ.ಕ. ಜಿಲ್ಲಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದೆಂದು ಎಸ್ಡಿಪಿಐ ದ.ಕ. ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೂನಿಷ್ ಅಲಿ ಎಚ್ಚರಿಕೆ ನೀಡಿದ್ದಾರೆ.
ಗ್ಯಾಂಗ್ವಾರ್ನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಜಿಲ್ಲೆಯ ಹಲವು ಭಾಗಗಳಲ್ಲಿ ಮುಸ್ಲಿಂ ಯುವಕರ ಹತ್ಯಾಯತ್ನ ನಡೆದಿತ್ತು. ಅಲ್ಲದೆ ಸಂಘಪರಿವಾರದ ನಾಯಕರಾದ ಭರತ್ ಕುಮ್ಡೇಲ್, ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಸಹಿತ ಹಲವು ಸಂಘ ಪರಿವಾರದ ನಾಯಕರು ಹತ್ಯೆಗೆ ಪ್ರತೀಕಾರ ನಡೆಸುತ್ತೇವೆ ಎಂದು ಬಹಿರಂಗವಾಗಿ ಭಾಷಣಗೈದು ಮುಸ್ಲಿಂ ಯುವಕರ ಹತ್ಯೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರು. ಆದರೂ ಕೂಡ ಪೋಲಿಸ್ ಇಲಾಖೆ ಹಾಗೂ ಸರಕಾರ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿಲ್ಲ. ಅದರ ಪರಿಣಾಮ ಕೊಳ್ತಮಜಲುವಿನಲ್ಲಿ ಅಬ್ದುಲ್ ರಹೀಂ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭರತ್ ಕುಮ್ಡೇಲ್ನ ಕೈವಾಡ ಇರುವುದು ಪೊಲೀಸ್ ಇಲಾಖೆಗೆ ತಿಳಿದಿದ್ದರೂ ಕೂಡ ಈತನಕ ಈತನ ಮೇಲೆ ಕ್ರಮವಾಗಿಲ್ಲ. ಗುರುವಾರ ಸಂಜೆಯೊಳಗೆ ಈತನ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಎಸ್ಪಿಕಚೇರಿ ಚಲೋ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳ ಸ್ಥಳಾಂತರಕ್ಕೆ ಮುಸ್ಲಿಂ ನಾಯಕರು ಇಟ್ಟಿರುವ ಬೇಡಿಕೆಯನ್ನು ಮುಖ್ಯಮಂತ್ರಿ ಒಪ್ಪಿದ್ದಾರೆ ಮತ್ತು ಶೀಘ್ರವೇ ಹೊಸ ಅಧಿಕಾರಿಗಳ ನೇಮಕ ಆಗಲಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಈ ಬಗ್ಗೆ ಪೋಸ್ಟರುಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…