ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ…!

ಇಡೀ ಋತುವಿನಲ್ಲಿ ನಿರಂತರವಾಗಿ ಮೀನುಗಾರಿಕೆ ನಡೆಸಲಾಗದೇ ಬೋಟುಗಳು ಮೀನುಗಾರಿಕೆಯನ್ನು ಮೊಟಕುಗೊಳಿಸಿ ಲಂಗರು ಹಾಕಲಾರಂಭಿಸಿವೆ. ವಾರದಿಂದ ಸುರಿದ ಮಳೆಯಂತೂ ಮೀನುಗಾರರ ಕೊನೆಯ ಹಂತದ ಆದಾಯವನ್ನೂ ಕಸಿದುಕೊಂಡಿದೆ. ಪ್ರತೀ ವರ್ಷ ಜೂನ್ ಒಂದರಿ0ದ ಎರಡು ತಿಂಗಳು ಮೀನುಗಾರಿಕೆಗೆ ರಜೆ ಇರುತ್ತದೆ. ಈ ಅವಧಿಯಲ್ಲಿ ಆಳಸಮುದ್ರ ಬೋಟ್‌ಗಳಿಗೆ ನಿಷೇಧವಿದೆ.

ಆದರೆ ಈ ವರ್ಷ ಮೇ ತಿಂಗಳಲ್ಲೇ ಹವಾಮಾನ ವೈಪರೀತ್ಯದಿಂದ ಮೀನುಗಾರಿಕೆ ನಡೆಸಲು ಆಗಿಲಿಲ್ಲ. ಜೊತೆಗೆ ಮತ್ಸ್ಯ ಕ್ಷಾಮವೂ ಸೇರಿ ಮೀನುಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹೀಗಾಗಿ ಮೀನುಗಾರರು ಬೇಸರದಿಂದಲೇ ಈ ಋತುವಿನ ಮೀನುಗಾರಿಕೆ ಕೊನೆಗೊಳಿಸಿದ್ದಾರೆ. ಉತ್ತಮ ಮೀನುಗಾರಿಕೆಯ ನಿರೀಕ್ಷೆಯಿಂದ 2024ರ ಆಗಸ್ಟ್ನಲ್ಲಿ ಮೀನುಗಾರಿಕೆಗೆ ಕಡಲಿಗಿಳಿದಿದ್ದ ಮೀನುಗಾರರಿಗೆ ವರ್ಷ ಪೂರ್ತಿ ನಿರೀಕ್ಷಿಸಿದಷ್ಟು ಮೀನು ಸಿಕ್ಕಿರಲಿಲ್ಲ. ನಷ್ಟಕ್ಕೊಳಗಾದ ಹಲವು ಬೋಟ್ ಮಾಲಕರು ಮೀನುಗಾರಿಕೆ ಮುಂದುವರಿಸಲಾಗದೇ 4 ತಿಂಗಳ ಹಿಂದೆಯೇ ಬೋಟ್‌ಗಳನ್ನು ಬಂದರಿನಲ್ಲಿ ಲಂಗರು ಹಾಕಿದ್ದರು.

ಜನವರಿಯಲ್ಲಿ ಶೇ. 40ರಷ್ಟು ಬೋಟ್‌ಗಳು ಲಂಗರು ಹಾಕಿದ್ದರೆ, ಈಗ ಆ ಸಂಖ್ಯೆ ಶೇ. 80 ಕ್ಕೆ ತಲುಪಿದೆ. ಪ್ರಸ್ತುತ ಶೇ.15-20ರಷ್ಟು ಬೋಟುಗಳು ಮಾತ್ರ ಮೀನುಗಾರಿಕೆಯಲ್ಲಿ ನಿರತವಾಗಿವೆ. ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ ಇದೆ. ಒಟ್ಟಾರೆ ಬೋಟ್ ಮತ್ತು ಮೀನು ಹಿಡಿಯುವ ಬಲೆಗಳಿಗೆ ಕೋಟಿಗೂ ಅಧಿಕ ಬಂಡವಾಳ ಹಾಕಿದ್ದ ಬೋಟ್ ಮಾಲೀಕರಿಗೆ ಈ ವರ್ಷ ನಷ್ಟವೇ ಆಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!