ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ…!

ಇಡೀ ಋತುವಿನಲ್ಲಿ ನಿರಂತರವಾಗಿ ಮೀನುಗಾರಿಕೆ ನಡೆಸಲಾಗದೇ ಬೋಟುಗಳು ಮೀನುಗಾರಿಕೆಯನ್ನು ಮೊಟಕುಗೊಳಿಸಿ ಲಂಗರು ಹಾಕಲಾರಂಭಿಸಿವೆ. ವಾರದಿಂದ ಸುರಿದ ಮಳೆಯಂತೂ ಮೀನುಗಾರರ ಕೊನೆಯ ಹಂತದ ಆದಾಯವನ್ನೂ ಕಸಿದುಕೊಂಡಿದೆ. ಪ್ರತೀ ವರ್ಷ ಜೂನ್ ಒಂದರಿ0ದ ಎರಡು ತಿಂಗಳು ಮೀನುಗಾರಿಕೆಗೆ ರಜೆ ಇರುತ್ತದೆ. ಈ ಅವಧಿಯಲ್ಲಿ ಆಳಸಮುದ್ರ ಬೋಟ್‌ಗಳಿಗೆ ನಿಷೇಧವಿದೆ.

ಆದರೆ ಈ ವರ್ಷ ಮೇ ತಿಂಗಳಲ್ಲೇ ಹವಾಮಾನ ವೈಪರೀತ್ಯದಿಂದ ಮೀನುಗಾರಿಕೆ ನಡೆಸಲು ಆಗಿಲಿಲ್ಲ. ಜೊತೆಗೆ ಮತ್ಸ್ಯ ಕ್ಷಾಮವೂ ಸೇರಿ ಮೀನುಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹೀಗಾಗಿ ಮೀನುಗಾರರು ಬೇಸರದಿಂದಲೇ ಈ ಋತುವಿನ ಮೀನುಗಾರಿಕೆ ಕೊನೆಗೊಳಿಸಿದ್ದಾರೆ. ಉತ್ತಮ ಮೀನುಗಾರಿಕೆಯ ನಿರೀಕ್ಷೆಯಿಂದ 2024ರ ಆಗಸ್ಟ್ನಲ್ಲಿ ಮೀನುಗಾರಿಕೆಗೆ ಕಡಲಿಗಿಳಿದಿದ್ದ ಮೀನುಗಾರರಿಗೆ ವರ್ಷ ಪೂರ್ತಿ ನಿರೀಕ್ಷಿಸಿದಷ್ಟು ಮೀನು ಸಿಕ್ಕಿರಲಿಲ್ಲ. ನಷ್ಟಕ್ಕೊಳಗಾದ ಹಲವು ಬೋಟ್ ಮಾಲಕರು ಮೀನುಗಾರಿಕೆ ಮುಂದುವರಿಸಲಾಗದೇ 4 ತಿಂಗಳ ಹಿಂದೆಯೇ ಬೋಟ್‌ಗಳನ್ನು ಬಂದರಿನಲ್ಲಿ ಲಂಗರು ಹಾಕಿದ್ದರು.

ಜನವರಿಯಲ್ಲಿ ಶೇ. 40ರಷ್ಟು ಬೋಟ್‌ಗಳು ಲಂಗರು ಹಾಕಿದ್ದರೆ, ಈಗ ಆ ಸಂಖ್ಯೆ ಶೇ. 80 ಕ್ಕೆ ತಲುಪಿದೆ. ಪ್ರಸ್ತುತ ಶೇ.15-20ರಷ್ಟು ಬೋಟುಗಳು ಮಾತ್ರ ಮೀನುಗಾರಿಕೆಯಲ್ಲಿ ನಿರತವಾಗಿವೆ. ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ ಇದೆ. ಒಟ್ಟಾರೆ ಬೋಟ್ ಮತ್ತು ಮೀನು ಹಿಡಿಯುವ ಬಲೆಗಳಿಗೆ ಕೋಟಿಗೂ ಅಧಿಕ ಬಂಡವಾಳ ಹಾಕಿದ್ದ ಬೋಟ್ ಮಾಲೀಕರಿಗೆ ಈ ವರ್ಷ ನಷ್ಟವೇ ಆಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!