ಇಡೀ ಋತುವಿನಲ್ಲಿ ನಿರಂತರವಾಗಿ ಮೀನುಗಾರಿಕೆ ನಡೆಸಲಾಗದೇ ಬೋಟುಗಳು ಮೀನುಗಾರಿಕೆಯನ್ನು ಮೊಟಕುಗೊಳಿಸಿ ಲಂಗರು ಹಾಕಲಾರಂಭಿಸಿವೆ. ವಾರದಿಂದ ಸುರಿದ ಮಳೆಯಂತೂ ಮೀನುಗಾರರ ಕೊನೆಯ ಹಂತದ ಆದಾಯವನ್ನೂ ಕಸಿದುಕೊಂಡಿದೆ. ಪ್ರತೀ ವರ್ಷ ಜೂನ್ ಒಂದರಿ0ದ ಎರಡು ತಿಂಗಳು ಮೀನುಗಾರಿಕೆಗೆ ರಜೆ ಇರುತ್ತದೆ. ಈ ಅವಧಿಯಲ್ಲಿ ಆಳಸಮುದ್ರ ಬೋಟ್ಗಳಿಗೆ ನಿಷೇಧವಿದೆ.
ಆದರೆ ಈ ವರ್ಷ ಮೇ ತಿಂಗಳಲ್ಲೇ ಹವಾಮಾನ ವೈಪರೀತ್ಯದಿಂದ ಮೀನುಗಾರಿಕೆ ನಡೆಸಲು ಆಗಿಲಿಲ್ಲ. ಜೊತೆಗೆ ಮತ್ಸ್ಯ ಕ್ಷಾಮವೂ ಸೇರಿ ಮೀನುಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹೀಗಾಗಿ ಮೀನುಗಾರರು ಬೇಸರದಿಂದಲೇ ಈ ಋತುವಿನ ಮೀನುಗಾರಿಕೆ ಕೊನೆಗೊಳಿಸಿದ್ದಾರೆ. ಉತ್ತಮ ಮೀನುಗಾರಿಕೆಯ ನಿರೀಕ್ಷೆಯಿಂದ 2024ರ ಆಗಸ್ಟ್ನಲ್ಲಿ ಮೀನುಗಾರಿಕೆಗೆ ಕಡಲಿಗಿಳಿದಿದ್ದ ಮೀನುಗಾರರಿಗೆ ವರ್ಷ ಪೂರ್ತಿ ನಿರೀಕ್ಷಿಸಿದಷ್ಟು ಮೀನು ಸಿಕ್ಕಿರಲಿಲ್ಲ. ನಷ್ಟಕ್ಕೊಳಗಾದ ಹಲವು ಬೋಟ್ ಮಾಲಕರು ಮೀನುಗಾರಿಕೆ ಮುಂದುವರಿಸಲಾಗದೇ 4 ತಿಂಗಳ ಹಿಂದೆಯೇ ಬೋಟ್ಗಳನ್ನು ಬಂದರಿನಲ್ಲಿ ಲಂಗರು ಹಾಕಿದ್ದರು.
ಜನವರಿಯಲ್ಲಿ ಶೇ. 40ರಷ್ಟು ಬೋಟ್ಗಳು ಲಂಗರು ಹಾಕಿದ್ದರೆ, ಈಗ ಆ ಸಂಖ್ಯೆ ಶೇ. 80 ಕ್ಕೆ ತಲುಪಿದೆ. ಪ್ರಸ್ತುತ ಶೇ.15-20ರಷ್ಟು ಬೋಟುಗಳು ಮಾತ್ರ ಮೀನುಗಾರಿಕೆಯಲ್ಲಿ ನಿರತವಾಗಿವೆ. ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ ಇದೆ. ಒಟ್ಟಾರೆ ಬೋಟ್ ಮತ್ತು ಮೀನು ಹಿಡಿಯುವ ಬಲೆಗಳಿಗೆ ಕೋಟಿಗೂ ಅಧಿಕ ಬಂಡವಾಳ ಹಾಕಿದ್ದ ಬೋಟ್ ಮಾಲೀಕರಿಗೆ ಈ ವರ್ಷ ನಷ್ಟವೇ ಆಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…