ಇಡೀ ಋತುವಿನಲ್ಲಿ ನಿರಂತರವಾಗಿ ಮೀನುಗಾರಿಕೆ ನಡೆಸಲಾಗದೇ ಬೋಟುಗಳು ಮೀನುಗಾರಿಕೆಯನ್ನು ಮೊಟಕುಗೊಳಿಸಿ ಲಂಗರು ಹಾಕಲಾರಂಭಿಸಿವೆ. ವಾರದಿಂದ ಸುರಿದ ಮಳೆಯಂತೂ ಮೀನುಗಾರರ ಕೊನೆಯ ಹಂತದ ಆದಾಯವನ್ನೂ ಕಸಿದುಕೊಂಡಿದೆ. ಪ್ರತೀ ವರ್ಷ ಜೂನ್ ಒಂದರಿ0ದ ಎರಡು ತಿಂಗಳು ಮೀನುಗಾರಿಕೆಗೆ ರಜೆ ಇರುತ್ತದೆ. ಈ ಅವಧಿಯಲ್ಲಿ ಆಳಸಮುದ್ರ ಬೋಟ್ಗಳಿಗೆ ನಿಷೇಧವಿದೆ.
ಆದರೆ ಈ ವರ್ಷ ಮೇ ತಿಂಗಳಲ್ಲೇ ಹವಾಮಾನ ವೈಪರೀತ್ಯದಿಂದ ಮೀನುಗಾರಿಕೆ ನಡೆಸಲು ಆಗಿಲಿಲ್ಲ. ಜೊತೆಗೆ ಮತ್ಸ್ಯ ಕ್ಷಾಮವೂ ಸೇರಿ ಮೀನುಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹೀಗಾಗಿ ಮೀನುಗಾರರು ಬೇಸರದಿಂದಲೇ ಈ ಋತುವಿನ ಮೀನುಗಾರಿಕೆ ಕೊನೆಗೊಳಿಸಿದ್ದಾರೆ. ಉತ್ತಮ ಮೀನುಗಾರಿಕೆಯ ನಿರೀಕ್ಷೆಯಿಂದ 2024ರ ಆಗಸ್ಟ್ನಲ್ಲಿ ಮೀನುಗಾರಿಕೆಗೆ ಕಡಲಿಗಿಳಿದಿದ್ದ ಮೀನುಗಾರರಿಗೆ ವರ್ಷ ಪೂರ್ತಿ ನಿರೀಕ್ಷಿಸಿದಷ್ಟು ಮೀನು ಸಿಕ್ಕಿರಲಿಲ್ಲ. ನಷ್ಟಕ್ಕೊಳಗಾದ ಹಲವು ಬೋಟ್ ಮಾಲಕರು ಮೀನುಗಾರಿಕೆ ಮುಂದುವರಿಸಲಾಗದೇ 4 ತಿಂಗಳ ಹಿಂದೆಯೇ ಬೋಟ್ಗಳನ್ನು ಬಂದರಿನಲ್ಲಿ ಲಂಗರು ಹಾಕಿದ್ದರು.
ಜನವರಿಯಲ್ಲಿ ಶೇ. 40ರಷ್ಟು ಬೋಟ್ಗಳು ಲಂಗರು ಹಾಕಿದ್ದರೆ, ಈಗ ಆ ಸಂಖ್ಯೆ ಶೇ. 80 ಕ್ಕೆ ತಲುಪಿದೆ. ಪ್ರಸ್ತುತ ಶೇ.15-20ರಷ್ಟು ಬೋಟುಗಳು ಮಾತ್ರ ಮೀನುಗಾರಿಕೆಯಲ್ಲಿ ನಿರತವಾಗಿವೆ. ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ ಇದೆ. ಒಟ್ಟಾರೆ ಬೋಟ್ ಮತ್ತು ಮೀನು ಹಿಡಿಯುವ ಬಲೆಗಳಿಗೆ ಕೋಟಿಗೂ ಅಧಿಕ ಬಂಡವಾಳ ಹಾಕಿದ್ದ ಬೋಟ್ ಮಾಲೀಕರಿಗೆ ಈ ವರ್ಷ ನಷ್ಟವೇ ಆಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…