ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮೇ 30: “ಸ್ಕೂಲ್ ಲೀಡರ್” ಸಿನಿಮಾ ತೆರೆಗೆ

ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿನಿಮಾದ ನಿರ್ಮಾಪಕ ಕೆ. ಸತ್ಯೇಂದ್ರ ಪೈ ಅವರು, ಈ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ, ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವ ಕಥಾವಸ್ತುವನ್ನು ಹೊಂದಿದೆ.

ಗಂಭೀರ ಕತೆಯನ್ನು ಹಾಸ್ಯದ ಲೇಪನದೊಂದಿಗೆ ಪ್ರೇಕ್ಷಕರಿಗೆ ಉಣಬಡಿಸುವ ಪ್ರಯತ್ನವನ್ನು ನಿರ್ದೇಶಕರು ಮಾಡಿದ್ದಾರೆ. ಇದು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ, ಚಿತ್ರೀಕರಿಸಲಾಗಿದೆ. ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಟ ಕೆ. ನಾಗೇಶ್ ಕಾಮತ್, ಚಿತ್ರ ಸಂಘಟಕ ಗಣೇಶ್ ಕಿಣಿ, ನಟಿ ಅಶ್ವಿನಿ, ಬಾಲನಟರಾದ ಯಶಸ್ ಸುವರ್ಣ, ವೈಷ್ಣವಿ ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!