ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿನಿಮಾದ ನಿರ್ಮಾಪಕ ಕೆ. ಸತ್ಯೇಂದ್ರ ಪೈ ಅವರು, ಈ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ, ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವ ಕಥಾವಸ್ತುವನ್ನು ಹೊಂದಿದೆ.
ಗಂಭೀರ ಕತೆಯನ್ನು ಹಾಸ್ಯದ ಲೇಪನದೊಂದಿಗೆ ಪ್ರೇಕ್ಷಕರಿಗೆ ಉಣಬಡಿಸುವ ಪ್ರಯತ್ನವನ್ನು ನಿರ್ದೇಶಕರು ಮಾಡಿದ್ದಾರೆ. ಇದು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ, ಚಿತ್ರೀಕರಿಸಲಾಗಿದೆ. ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಟ ಕೆ. ನಾಗೇಶ್ ಕಾಮತ್, ಚಿತ್ರ ಸಂಘಟಕ ಗಣೇಶ್ ಕಿಣಿ, ನಟಿ ಅಶ್ವಿನಿ, ಬಾಲನಟರಾದ ಯಶಸ್ ಸುವರ್ಣ, ವೈಷ್ಣವಿ ಉಪಸ್ಥಿತರಿದ್ರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…