ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ತುರ್ತು ಸಭೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ, ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು ಎಂದು ಆಗ್ರಹಿಸಿದ್ದಾರೆ. ನಾವು ರಾಜೀನಾಮೆ ನೀಡುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದ ಕಾರಣ ಸಭಾಂಗಣದಲ್ಲಿ ಏನು ನಡೆಯುತ್ತಿದೆ ಎಂದು ಯಾರಿಗೂ ಕೇಳಿಸದಷ್ಟು ಗದ್ದಲವುಂಟಾಯಿತು. ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮುಖಂಡರು ಹರಸಾಹಸಪಟ್ಟಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…