ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮಗು ಮೃತಪಟ್ಟ ಘಟನೆ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಮೊಂಟೆ ಪದವುನಲ್ಲಿ ಗುಡ್ಡ ಜರಿದು ಮೂವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಇದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕುಂಪಲ, ಕಲ್ಲಾಪು, ಧರ್ಮ ನಗರ, ಉಚ್ಚಿಲ, ತಲಪಾಡಿ, ವಿದ್ಯಾನಗರ, ಕಲ್ಕಟ್ಟ ಮುಂತಾದ ಕಡೆಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಮನೆಯೊಳಗೆ ನೀರು ನುಗ್ಗಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆ ಸ್ಥಳಾಂತರಗೊ0ಡಿದೆ. ಕಲ್ಲಾಪುವಿನಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಲಪಾಡಿ ಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ.
ಈ ಕುಟುಂಬವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ, ಗ್ರಾಮಕರಣಿಕ ಸುರೇಶ್ ಮತ್ತಿತರರು ರಾತ್ರಿ ವೇಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…