ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ಮಂಗಳೂರು ನಗರದ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ ಎಂದು ಗುರುತಿಸಲಾಗಿದೆ.
ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು,ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎನ್ಡಿಆರ್ಎಫ್, ಎಸ್ ಡಿ ಆರ್ಎಫ್ , ಉಳ್ಳಾಲ ತಾಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…