ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಯೊಂದರ ಹಿಂಭಾಗಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರರಿಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮೇ.29ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಒಕ್ಕೆತ್ತೂರು ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇರ್ಫಾನ್ ಮೃತ ದುರ್ದೈವಿಯಾಗಿದ್ದಾನೆ.
ಸಹಸವಾರ ಒಕ್ಕೆತ್ತೂರು ನಿವಾಸಿ ಪುತ್ತು ಎಂಬವರ ಪುತ್ರ ಫಾರೀಸ್ ಗಂಭೀರ ಗಾಯಗೊಂಡವರಾಗಿದ್ದಾರೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿಯನ್ನು ನಿಲ್ಲಿಸಿ ಚಾ ಕುಡಿಯಲು ಹೋಗಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…