ಜನ ಮನದ ನಾಡಿ ಮಿಡಿತ

Advertisement

ಸಿನಿಮಾ ಆಗಲಿದೆಯ ಸೌಜನ್ಯ ಸಾವು-ನೋವಿನ ಕಥೆ? ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ನೈಜ ಘಟನೆಯ ಆಧಾರಿತ ಅನೇಕ ಸಿನಿಮಾಗಳು ಈಗಾಗಲೇ ಮೂಡಿ ಬಂದು ಅನೇಕ ಪ್ರೇಕ್ಷಕರ ಮನ ಗೆದ್ದಿದೆ, ಅಂತೆಯೇ ಸಿನಿಮಾದಲ್ಲಿ ತೋರಿಸುವ ಘಟನಾವಳಿಗಳು ಮನಸ್ಸನ್ನು ತಲ್ಲಣಗೊಳಿಸುವುದೂ ಉಂಟು. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಬಂದಿವೆ. ಅಂತಹದ್ದೇ ಸಾಲಿನಲ್ಲಿ ಧರ್ಮಸ್ಥಳದಲ್ಲಿ ನಡೆದ ಘಟನೆಯೊಂದು ಚಲನಚಿತ್ರವಾಗಿ ಮೂಡಿಬರಲಿದೆ. ಜನ ಸಮೂಹವನ್ನೇ ಬೆಚ್ಚಿ ಬೀಳಿಸಿದ ಉಜಿರೆಯ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯನ್ನು ಆಧಾರಿಸಿ ಸ್ಯಾಂಡಲ್‌ವುಡ್ ನಲ್ಲಿ ಸಿನಿಮಾವೊಂದು ಸಿದ್ಧವಾಗುತ್ತಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.

ನಡೆದದ್ದಾದರೂ ಏನು?
2012ರಲ್ಲಿ ನಡೆದ ಉಜಿರೆ ಎಸ್. ಡಿ. ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರು ಅಕ್ಟೋಬರ್ 9 ರಂದು ಕಾಲೇಜಿಗೆ ಹೋಗಿದ್ದು ಮರಳಿ ಬಾರದೆ ಇದ್ದಾಗ ಮನೆಯವರು ಮಿಸ್ಸಿಂಗ್ ಕೇಸ್ ಫೈಲ್ ಮಾಡುತ್ತಾರೆ. ಅಕ್ಟೋಬರ್ 10 2022 ರಂದು ಧರ್ಮಸ್ಥಳದ ಮಣ್ಣಸಂಖ ದಲ್ಲಿ ಅವರ ಶವ ಅರೆನಗ್ನ ಸ್ತಿತಿಯಲ್ಲಿ ಪತ್ತೆಯಾಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಇಷ್ಟು ವರ್ಷಗಳು ಕಳೆದರೂ ಸೌಜನ್ಯಾ ಕೇಸ್ ಬಗೆಹರಿಸಲು ಸಾಧ್ಯವಾಗಲಿಲ್ಲ. ಕಾಣದ ಕೈಗಳ ಕುತಂತ್ರಕ್ಕೆ ನ್ಯಾಯ ಮರುಭೂಮಿಯ ಮರೀಚಿಕೆಯಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!