ನೈಜ ಘಟನೆಯ ಆಧಾರಿತ ಅನೇಕ ಸಿನಿಮಾಗಳು ಈಗಾಗಲೇ ಮೂಡಿ ಬಂದು ಅನೇಕ ಪ್ರೇಕ್ಷಕರ ಮನ ಗೆದ್ದಿದೆ, ಅಂತೆಯೇ ಸಿನಿಮಾದಲ್ಲಿ ತೋರಿಸುವ ಘಟನಾವಳಿಗಳು ಮನಸ್ಸನ್ನು ತಲ್ಲಣಗೊಳಿಸುವುದೂ ಉಂಟು. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಬಂದಿವೆ. ಅಂತಹದ್ದೇ ಸಾಲಿನಲ್ಲಿ ಧರ್ಮಸ್ಥಳದಲ್ಲಿ ನಡೆದ ಘಟನೆಯೊಂದು ಚಲನಚಿತ್ರವಾಗಿ ಮೂಡಿಬರಲಿದೆ. ಜನ ಸಮೂಹವನ್ನೇ ಬೆಚ್ಚಿ ಬೀಳಿಸಿದ ಉಜಿರೆಯ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯನ್ನು ಆಧಾರಿಸಿ ಸ್ಯಾಂಡಲ್ವುಡ್ ನಲ್ಲಿ ಸಿನಿಮಾವೊಂದು ಸಿದ್ಧವಾಗುತ್ತಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.
ನಡೆದದ್ದಾದರೂ ಏನು?
2012ರಲ್ಲಿ ನಡೆದ ಉಜಿರೆ ಎಸ್. ಡಿ. ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರು ಅಕ್ಟೋಬರ್ 9 ರಂದು ಕಾಲೇಜಿಗೆ ಹೋಗಿದ್ದು ಮರಳಿ ಬಾರದೆ ಇದ್ದಾಗ ಮನೆಯವರು ಮಿಸ್ಸಿಂಗ್ ಕೇಸ್ ಫೈಲ್ ಮಾಡುತ್ತಾರೆ. ಅಕ್ಟೋಬರ್ 10 2022 ರಂದು ಧರ್ಮಸ್ಥಳದ ಮಣ್ಣಸಂಖ ದಲ್ಲಿ ಅವರ ಶವ ಅರೆನಗ್ನ ಸ್ತಿತಿಯಲ್ಲಿ ಪತ್ತೆಯಾಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಇಷ್ಟು ವರ್ಷಗಳು ಕಳೆದರೂ ಸೌಜನ್ಯಾ ಕೇಸ್ ಬಗೆಹರಿಸಲು ಸಾಧ್ಯವಾಗಲಿಲ್ಲ. ಕಾಣದ ಕೈಗಳ ಕುತಂತ್ರಕ್ಕೆ ನ್ಯಾಯ ಮರುಭೂಮಿಯ ಮರೀಚಿಕೆಯಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…