ನೈಜ ಘಟನೆಯ ಆಧಾರಿತ ಅನೇಕ ಸಿನಿಮಾಗಳು ಈಗಾಗಲೇ ಮೂಡಿ ಬಂದು ಅನೇಕ ಪ್ರೇಕ್ಷಕರ ಮನ ಗೆದ್ದಿದೆ, ಅಂತೆಯೇ ಸಿನಿಮಾದಲ್ಲಿ ತೋರಿಸುವ ಘಟನಾವಳಿಗಳು ಮನಸ್ಸನ್ನು ತಲ್ಲಣಗೊಳಿಸುವುದೂ ಉಂಟು. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಬಂದಿವೆ. ಅಂತಹದ್ದೇ ಸಾಲಿನಲ್ಲಿ ಧರ್ಮಸ್ಥಳದಲ್ಲಿ ನಡೆದ ಘಟನೆಯೊಂದು ಚಲನಚಿತ್ರವಾಗಿ ಮೂಡಿಬರಲಿದೆ. ಜನ ಸಮೂಹವನ್ನೇ ಬೆಚ್ಚಿ ಬೀಳಿಸಿದ ಉಜಿರೆಯ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯನ್ನು ಆಧಾರಿಸಿ ಸ್ಯಾಂಡಲ್ವುಡ್ ನಲ್ಲಿ ಸಿನಿಮಾವೊಂದು ಸಿದ್ಧವಾಗುತ್ತಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.
ನಡೆದದ್ದಾದರೂ ಏನು?
2012ರಲ್ಲಿ ನಡೆದ ಉಜಿರೆ ಎಸ್. ಡಿ. ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರು ಅಕ್ಟೋಬರ್ 9 ರಂದು ಕಾಲೇಜಿಗೆ ಹೋಗಿದ್ದು ಮರಳಿ ಬಾರದೆ ಇದ್ದಾಗ ಮನೆಯವರು ಮಿಸ್ಸಿಂಗ್ ಕೇಸ್ ಫೈಲ್ ಮಾಡುತ್ತಾರೆ. ಅಕ್ಟೋಬರ್ 10 2022 ರಂದು ಧರ್ಮಸ್ಥಳದ ಮಣ್ಣಸಂಖ ದಲ್ಲಿ ಅವರ ಶವ ಅರೆನಗ್ನ ಸ್ತಿತಿಯಲ್ಲಿ ಪತ್ತೆಯಾಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಇಷ್ಟು ವರ್ಷಗಳು ಕಳೆದರೂ ಸೌಜನ್ಯಾ ಕೇಸ್ ಬಗೆಹರಿಸಲು ಸಾಧ್ಯವಾಗಲಿಲ್ಲ. ಕಾಣದ ಕೈಗಳ ಕುತಂತ್ರಕ್ಕೆ ನ್ಯಾಯ ಮರುಭೂಮಿಯ ಮರೀಚಿಕೆಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…