ನೈಜ ಘಟನೆಯ ಆಧಾರಿತ ಅನೇಕ ಸಿನಿಮಾಗಳು ಈಗಾಗಲೇ ಮೂಡಿ ಬಂದು ಅನೇಕ ಪ್ರೇಕ್ಷಕರ ಮನ ಗೆದ್ದಿದೆ, ಅಂತೆಯೇ ಸಿನಿಮಾದಲ್ಲಿ ತೋರಿಸುವ ಘಟನಾವಳಿಗಳು ಮನಸ್ಸನ್ನು ತಲ್ಲಣಗೊಳಿಸುವುದೂ ಉಂಟು. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಬಂದಿವೆ. ಅಂತಹದ್ದೇ ಸಾಲಿನಲ್ಲಿ ಧರ್ಮಸ್ಥಳದಲ್ಲಿ ನಡೆದ ಘಟನೆಯೊಂದು ಚಲನಚಿತ್ರವಾಗಿ ಮೂಡಿಬರಲಿದೆ. ಜನ ಸಮೂಹವನ್ನೇ ಬೆಚ್ಚಿ ಬೀಳಿಸಿದ ಉಜಿರೆಯ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯನ್ನು ಆಧಾರಿಸಿ ಸ್ಯಾಂಡಲ್ವುಡ್ ನಲ್ಲಿ ಸಿನಿಮಾವೊಂದು ಸಿದ್ಧವಾಗುತ್ತಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.
ನಡೆದದ್ದಾದರೂ ಏನು?
2012ರಲ್ಲಿ ನಡೆದ ಉಜಿರೆ ಎಸ್. ಡಿ. ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರು ಅಕ್ಟೋಬರ್ 9 ರಂದು ಕಾಲೇಜಿಗೆ ಹೋಗಿದ್ದು ಮರಳಿ ಬಾರದೆ ಇದ್ದಾಗ ಮನೆಯವರು ಮಿಸ್ಸಿಂಗ್ ಕೇಸ್ ಫೈಲ್ ಮಾಡುತ್ತಾರೆ. ಅಕ್ಟೋಬರ್ 10 2022 ರಂದು ಧರ್ಮಸ್ಥಳದ ಮಣ್ಣಸಂಖ ದಲ್ಲಿ ಅವರ ಶವ ಅರೆನಗ್ನ ಸ್ತಿತಿಯಲ್ಲಿ ಪತ್ತೆಯಾಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಇಷ್ಟು ವರ್ಷಗಳು ಕಳೆದರೂ ಸೌಜನ್ಯಾ ಕೇಸ್ ಬಗೆಹರಿಸಲು ಸಾಧ್ಯವಾಗಲಿಲ್ಲ. ಕಾಣದ ಕೈಗಳ ಕುತಂತ್ರಕ್ಕೆ ನ್ಯಾಯ ಮರುಭೂಮಿಯ ಮರೀಚಿಕೆಯಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…