ಜನ ಮನದ ನಾಡಿ ಮಿಡಿತ

Advertisement

ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಮುಂಜಾಗೃತೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ -ಯು.ಟಿ.ಖಾದರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು, ಮದೀನದಿಂದ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್, ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ ಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಳ್ಳಾಲ ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದ್ದು ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು, ಸೋಮೇಶ್ವವರ, ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದ್ದು ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೂ ಕೂಡಾ ತರಲಾಗಿದ್ದು ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಯು.ಟಿ.ಖಾದರ್ ತಿಳಿಸಿದ್ದಾರೆ. ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವ ಯು.ಟಿ.ಖಾದರ್ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡು ರಕ್ಷಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಆದಾಗ್ಯೂ ಸಾರ್ವಜನಿಕರು ಅಗತ್ಯ ಬಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ನನ್ನ ದೂರವಾಣಿ ಸಂಖ್ಯೆಯನ್ನು ಸಂಪರ್ಕ ಮಾಡಬಹುದು. ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ (೧೦),ಮಂಜನಾಡಿ ಗ್ರಾಮದ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಗುಡ್ಡ ಜರಿದು ಐವರು ಮಣ್ಣಿನಡಿಯಲ್ಲಿ ಸಿಲುಕಿ ಪ್ರೇಮ ಪೂಜಾರಿ ರವರು ಮೃತರಾಗಿದ್ದು ಇತರರ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಅಪರ ಜಿಲ್ಲಾಧಿಕಾರಿ ತಹಶೀಲ್ದಾರು ಹಾಗೂ ಇತರ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ,ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊ0ಡು ಸಹಕರಿಸುವಂತೆ ಸಭಾಧ್ಯಕ್ಷರು ಸೂಚನೆ ನೀಡಿದ್ದು ಜನ ಸಾಮಾನ್ಯರೂ ಕೂಡಾ ಎಚ್ಚರಿಕೆ ವಹಿಸುವಂತೆ ಸಭಾಧ್ಯಕ್ಷರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!