ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಗಳೂರು ನಗರದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತ ಗೊಂಡಿದೆ.

ಕು0ಪಲ, ಕಲ್ಲಾಪು, ಧರ್ಮನಗರ, ಉಚ್ಚಿಲ, ತಲಪಾಡಿ, ವಿದ್ಯಾನಗರ, ಕಲ್ಕಟ್ಟ ಮುಂತಾದ ಕಡೆ ಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು ಮನೆಯೊಳಗೆ ನೀರು ನುಗ್ಗಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆಗೆ ಸ್ಥಳಾಂತರ ಗೊಂಡಿದೆ. ಕಲ್ಲಾಪುವಿನಲ್ಲಿ 50 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಲಪಾಡಿ ಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಈ ಕುಟುಂಬ ವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



