ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮಂಗಳಪದವು ಎಂಬಲ್ಲಿ ನಡೆದಿದೆ.
ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಒಕ್ಕೆತ್ತೂರಿನ ಫಾರಿಸ್ ಮತ್ತು ಇರ್ಫಾನ್ ಎಂದು ಹೇಳಲಾಗುತ್ತಿದ್ದು, ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…