ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದ್ರು. ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್ ಅವರು, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ ನೀಡಬಾರದು. ಕೋಮು ಪ್ರಚೋದನೆ ನೀಡುವ ಮಾಹಿತಿಗಳಿದ್ದರೆ ತಕ್ಷಣವೇ ಪೊಲೀಸರಿಗೆ ತಿಳಿಸಬೇಕು. ಸಾರ್ವಜನಿಕರು ಯಾವುದೇ ಪ್ರಚೋದನೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಹಿಂದಿನ ಎಸ್ಪಿ ಅರುಣ್ ಕುಮಾರ್ ಅವರು, ಅಕ್ರಮ ಚಟುವಟಿಕೆ ವಿರುದ್ಧ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಯಾವುದೆಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದರೋ ಅವುಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!