ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದ್ರು. ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್ ಅವರು, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ ನೀಡಬಾರದು. ಕೋಮು ಪ್ರಚೋದನೆ ನೀಡುವ ಮಾಹಿತಿಗಳಿದ್ದರೆ ತಕ್ಷಣವೇ ಪೊಲೀಸರಿಗೆ ತಿಳಿಸಬೇಕು. ಸಾರ್ವಜನಿಕರು ಯಾವುದೇ ಪ್ರಚೋದನೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಹಿಂದಿನ ಎಸ್ಪಿ ಅರುಣ್ ಕುಮಾರ್ ಅವರು, ಅಕ್ರಮ ಚಟುವಟಿಕೆ ವಿರುದ್ಧ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಯಾವುದೆಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದರೋ ಅವುಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!