ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕೋಮು ದ್ವೇಷ ಭಾಷಣ ಮಾಡಿದವರನ್ನ ಬಂಧಿಸಿ; SKSSF ಆಗ್ರಹ

ಬಂಟ್ವಾಳ ತಾಲೂಕಿನ ಕೊಳ್ತಮಜಲು ಎಂಬಲ್ಲಿನ ಅಬ್ದುಲ್ ರಹೀಂ ಎಂಬ ಆಮಾಯಕ ಕೂಲಿ ಕಾರ್ಮಿಕನನ್ನು ದುಷ್ಟ ಶಕ್ತಿಗಳು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದು, ಅಮಾಯಕ ಅಬ್ದುಲ್ ರಹೀಮನ ಕುಟುಂಬಕ್ಕೆ ಸರಕಾರ 50 ಲಕ್ಷ ಪರಿಹಾರ ನೀಡಬೇಕು. ಕರಾವಳಿಯ ಈ ಘಟನೆಗೆ ಪೋಲೀಸ್ ಇಲಾಖೆಯ ವೈಫಲ್ಯ ಮತ್ತು ನಿರ್ಲಕ್ಷ್ಯ ಸ್ಪಷ್ಟವಾಗಿದ್ದು ಸರಕಾರವು ಕರಾವಳಿ ಪೋಲೀಸ್ ಇಲಾಖೆಯಲ್ಲಿ ಶೀಘ್ರದಲ್ಲೇ ಬದಲಾವಣೆ ತರಬೇಕು ಎಂದು ಎಸ್.ಕೆ.ಎಸ್.ಎಸ್.ಎಫ್ ದ.ಕ. ಈಸ್ಟ್ ಜಿಲ್ಲೆ ಸಮಿತಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ದ.ಕ ಜಿಲ್ಲೆಯಲ್ಲಿ ಕೋಮು ಪ್ರೇರಿತ ಕೊಲೆಗಳ ಸರಣಿ ಮುಂದುವರಿಯುತ್ತಿದ್ದು, ಇದು ಸಾರ್ವಜನಿಕರನ್ನು ಭಯಭೀತರಾಗಿಸಿದೆ. ಜನ ಸಾಮಾನ್ಯರ ವಿಶೇಷವಾಗಿ ದಿನಕೂಲಿ ಕೆಲಸ ಮಾಡಿ ಬದುಕುವವರ ಬದುಕಿನ ದಾರಿಯನ್ನು ಇದು ಕುಸಿಯುತ್ತಿದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ಕೋಮು ದ್ವೇಷ ಭಾಷಣ ಮಾಡುವವನನ್ನು ಕೂಡಲೇ ಬಂಧಿಸಬೇಕು. ಈ ದುಷ್ಕೃತ್ಯದ ಕೊಲೆಗಾರರು ಮತ್ತು ಸಂಚು ರೂಪಿಸಿದವರ ವಿರುದ್ಧ ಕಠಿಣ ಕ್ರಮ ಕ್ಷಿಪ್ರವಾಗಿ ಜರಗಿಸಬೇಕು. ಈ ಸರಕಾರದ ಮೇಲೆ ನಮಗೆ ವಿಶ್ವಾಸವಿತ್ತು. ಆದರೆ ಅದು ಈಗ ದೂರವಾಗುತ್ತಿದೆ. ಗೃಹ ಸಚಿವರನ್ನು ತಕ್ಷಣ ಬದಲಾವಣೆ ಮಾಡಬೇಕು ಎಂದು ಎಸ್.ಕೆ.ಎಸ್.ಎಸ್.ಎಫ್ ದ.ಕ. ಈಸ್ಟ್ ಜಿಲ್ಲೆ ಸಮಿತಿ ಉಪಾಧ್ಯಕ್ಷ ಅಬ್ದುಲ್ ರಶೀದ್ ರಹ್ಮಾನಿ ಪರ್ಲಡ್ಕ ಒತ್ತಾಯಿಸಿದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಕೌಸರಿ, ಕಾರ್ಯದರ್ಶಿ ಅಶ್ರಫ್ ಮುಕ್ವೆ, ಕೋಶಾಧಿಕಾರಿ ಜಮಾಲ್ ಕೋಡಪದವು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!