ಬಂಟ್ವಾಳ ತಾಲೂಕಿನ ಕೊಳ್ತಮಜಲು ಎಂಬಲ್ಲಿನ ಅಬ್ದುಲ್ ರಹೀಂ ಎಂಬ ಆಮಾಯಕ ಕೂಲಿ ಕಾರ್ಮಿಕನನ್ನು ದುಷ್ಟ ಶಕ್ತಿಗಳು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದು, ಅಮಾಯಕ ಅಬ್ದುಲ್ ರಹೀಮನ ಕುಟುಂಬಕ್ಕೆ ಸರಕಾರ 50 ಲಕ್ಷ ಪರಿಹಾರ ನೀಡಬೇಕು. ಕರಾವಳಿಯ ಈ ಘಟನೆಗೆ ಪೋಲೀಸ್ ಇಲಾಖೆಯ ವೈಫಲ್ಯ ಮತ್ತು ನಿರ್ಲಕ್ಷ್ಯ ಸ್ಪಷ್ಟವಾಗಿದ್ದು ಸರಕಾರವು ಕರಾವಳಿ ಪೋಲೀಸ್ ಇಲಾಖೆಯಲ್ಲಿ ಶೀಘ್ರದಲ್ಲೇ ಬದಲಾವಣೆ ತರಬೇಕು ಎಂದು ಎಸ್.ಕೆ.ಎಸ್.ಎಸ್.ಎಫ್ ದ.ಕ. ಈಸ್ಟ್ ಜಿಲ್ಲೆ ಸಮಿತಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ದ.ಕ ಜಿಲ್ಲೆಯಲ್ಲಿ ಕೋಮು ಪ್ರೇರಿತ ಕೊಲೆಗಳ ಸರಣಿ ಮುಂದುವರಿಯುತ್ತಿದ್ದು, ಇದು ಸಾರ್ವಜನಿಕರನ್ನು ಭಯಭೀತರಾಗಿಸಿದೆ. ಜನ ಸಾಮಾನ್ಯರ ವಿಶೇಷವಾಗಿ ದಿನಕೂಲಿ ಕೆಲಸ ಮಾಡಿ ಬದುಕುವವರ ಬದುಕಿನ ದಾರಿಯನ್ನು ಇದು ಕುಸಿಯುತ್ತಿದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ಕೋಮು ದ್ವೇಷ ಭಾಷಣ ಮಾಡುವವನನ್ನು ಕೂಡಲೇ ಬಂಧಿಸಬೇಕು. ಈ ದುಷ್ಕೃತ್ಯದ ಕೊಲೆಗಾರರು ಮತ್ತು ಸಂಚು ರೂಪಿಸಿದವರ ವಿರುದ್ಧ ಕಠಿಣ ಕ್ರಮ ಕ್ಷಿಪ್ರವಾಗಿ ಜರಗಿಸಬೇಕು. ಈ ಸರಕಾರದ ಮೇಲೆ ನಮಗೆ ವಿಶ್ವಾಸವಿತ್ತು. ಆದರೆ ಅದು ಈಗ ದೂರವಾಗುತ್ತಿದೆ. ಗೃಹ ಸಚಿವರನ್ನು ತಕ್ಷಣ ಬದಲಾವಣೆ ಮಾಡಬೇಕು ಎಂದು ಎಸ್.ಕೆ.ಎಸ್.ಎಸ್.ಎಫ್ ದ.ಕ. ಈಸ್ಟ್ ಜಿಲ್ಲೆ ಸಮಿತಿ ಉಪಾಧ್ಯಕ್ಷ ಅಬ್ದುಲ್ ರಶೀದ್ ರಹ್ಮಾನಿ ಪರ್ಲಡ್ಕ ಒತ್ತಾಯಿಸಿದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಕೌಸರಿ, ಕಾರ್ಯದರ್ಶಿ ಅಶ್ರಫ್ ಮುಕ್ವೆ, ಕೋಶಾಧಿಕಾರಿ ಜಮಾಲ್ ಕೋಡಪದವು ಉಪಸ್ಥಿತರಿದ್ರು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…