ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸಾಲೆತ್ತೂರು ಸೇರಿದಂತೆ ವಿವಿಧೆಡೆ ಗುಡ್ಡ ಕುಸಿತ..!

ಮಳೆಯ ಆರ್ಭಟ ನಿಲ್ಲದೆ ಇರುವುದರಿಂದ ನಿರಂತರವಾಗಿ ತಾಲೂಕಿನ ಅನೇಕ ಕಡೆಗಳಲ್ಲಿ ಮಳೆಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಮೆದು ಎಂಬಲ್ಲಿ ಉಮಾವತಿ ಅವರ ವಾಸದ ಮನೆಗೆ ಪಕ್ಕದ ಗುಡ್ಡ ಜರಿದು ಬಾಗಶಃ ಹಾನಿಯಾಗಿದ್ದು, ಮನೆಯವರನ್ನು ಅವರ ಸಂಬ0ಧಿಕರ ಮನೆಗೆ ಸ್ಥಳಾಂತರ ಮಾಡಲಾಯಿತು. ಯಾವುದೇ ಪ್ರಾಣ ಹಾನಿಯಾಗಿರುವುದಿಲ್ಲ. ಮಾಣಿಲ ಗ್ರಾಮದ ಕೊಂದಲಕೋಡಿ ಗಿರೀಶ ರವರ ಮನೆಯ ಹಿಂಬದಿಗೆ ಗುಡ್ಡ ಕುಸಿದು ಹಾನಿಯಾಗಿರುತ್ತದೆ.


ವಿಟ್ಲ ಮುಡ್ನೂರು ಕಂಬಳಬೆಟ್ಟು ನಿವಾಸಿ ಹಾಜಿರ ಅವರ ಮನೆಗೆ ಭಾಗಷ ಹಾನಿ. ಯಾವುದೇ ಪ್ರಾಣ ಹಾನಿಯಿಲ್ಲ. ವಿಟ್ಲ ಮುಡ್ನೂರು ಕಂಬಳಬೆಟ್ಟು ಶಾಂತಿ ನಗರ ನಿವಾಸಿ ನೆಬಿಸ ರವರ ವಾಸದ ಮನೆಗೆ ಭಾಗಷ ಹಾನಿಯಾಗಿದ್ದು, ಯಾವುದೇ ಪ್ರಾಣ ಹಾನಿಯಿಲ್ಲ. ಕರೊಪಾಡಿ ಗ್ರಾಮ ದ ಓಡಿಯೂರು ನಿವಾಸಿ ಹರಿನಾಕ್ಷಿ ಎಂಬವರ ಹಂಚಿನ ಮನೆಯ ಚಾವಣಿ ಕುಸಿದು ತೀವ್ರ ಹಾನಿಯಾಗಿದ್ದು ಕುಟುಂಬವನ್ನು ಸ್ಥಳಾಂತರ ಮಾಡಲಾಗಿದೆ. ಯಾವುದೇ ಪ್ರಾಣ ಹಾನಿಯಿಲ್ಲ. ವಿಟ್ಲ ಮುಡ್ನೂರು ನೂಜಿ ನಿವಾಸಿ ಹಾಜಿರಾರವರ ಮನೆಯ ಮಣ್ಣಿನ ಗೋಡೆ ಕುಸಿದು ಹಾನಿ.

ಯಾವುದೇ ಪ್ರಾಣ ಹಾನಿಯಿಲ್ಲ ಅಮ್ಮುಂಜೆ ಗ್ರಾಮದ ಸುಲೋಚನ ಎಂಬವರ ಮನೆಯ ಮೇಲ್ಛಾವಣಿ ಕುಸಿದಿದೆ. ಬಂಟ್ವಾಳ ತಾಲ್ಲೂಕು ನರಿ ಕೊಂಬು ಗ್ರಾಮದ ಇಬ್ರಾಹಿಂ ಅವರ ಮನೆಯ ಹಿಂದಿನ ಗುಡ್ಡ ಕುಸಿಯುವ ಭೀತಿ ಇದ್ದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರೊಂದಿಗೆ ಜಂಟಿಯಾಗಿ ಸ್ಥಳ ಭೇಟಿ ಮಾಡಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಯಿತು. ಕಡೇಶ್ವಾಲ್ಯ ಗ್ರಾಮದ ಸೇರಾ ತನಿಯಪ್ಪ ರವರ ಮನೆಯ ಪಕ್ಕದ ಗುಡ್ಡೆಯ ಮಣ್ಣು ಕುಸಿದಿದ್ದು ಯಾವುದೇ ಹಾನಿ ಇರುವುದಿಲ್ಲ ಎಂದು ಕಂದಾಯ ಇಲಾಖೆ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!