ಮಳೆಯ ಆರ್ಭಟ ನಿಲ್ಲದೆ ಇರುವುದರಿಂದ ನಿರಂತರವಾಗಿ ತಾಲೂಕಿನ ಅನೇಕ ಕಡೆಗಳಲ್ಲಿ ಮಳೆಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಮೆದು ಎಂಬಲ್ಲಿ ಉಮಾವತಿ ಅವರ ವಾಸದ ಮನೆಗೆ ಪಕ್ಕದ ಗುಡ್ಡ ಜರಿದು ಬಾಗಶಃ ಹಾನಿಯಾಗಿದ್ದು, ಮನೆಯವರನ್ನು ಅವರ ಸಂಬ0ಧಿಕರ ಮನೆಗೆ ಸ್ಥಳಾಂತರ ಮಾಡಲಾಯಿತು. ಯಾವುದೇ ಪ್ರಾಣ ಹಾನಿಯಾಗಿರುವುದಿಲ್ಲ. ಮಾಣಿಲ ಗ್ರಾಮದ ಕೊಂದಲಕೋಡಿ ಗಿರೀಶ ರವರ ಮನೆಯ ಹಿಂಬದಿಗೆ ಗುಡ್ಡ ಕುಸಿದು ಹಾನಿಯಾಗಿರುತ್ತದೆ.
ವಿಟ್ಲ ಮುಡ್ನೂರು ಕಂಬಳಬೆಟ್ಟು ನಿವಾಸಿ ಹಾಜಿರ ಅವರ ಮನೆಗೆ ಭಾಗಷ ಹಾನಿ. ಯಾವುದೇ ಪ್ರಾಣ ಹಾನಿಯಿಲ್ಲ. ವಿಟ್ಲ ಮುಡ್ನೂರು ಕಂಬಳಬೆಟ್ಟು ಶಾಂತಿ ನಗರ ನಿವಾಸಿ ನೆಬಿಸ ರವರ ವಾಸದ ಮನೆಗೆ ಭಾಗಷ ಹಾನಿಯಾಗಿದ್ದು, ಯಾವುದೇ ಪ್ರಾಣ ಹಾನಿಯಿಲ್ಲ. ಕರೊಪಾಡಿ ಗ್ರಾಮ ದ ಓಡಿಯೂರು ನಿವಾಸಿ ಹರಿನಾಕ್ಷಿ ಎಂಬವರ ಹಂಚಿನ ಮನೆಯ ಚಾವಣಿ ಕುಸಿದು ತೀವ್ರ ಹಾನಿಯಾಗಿದ್ದು ಕುಟುಂಬವನ್ನು ಸ್ಥಳಾಂತರ ಮಾಡಲಾಗಿದೆ. ಯಾವುದೇ ಪ್ರಾಣ ಹಾನಿಯಿಲ್ಲ. ವಿಟ್ಲ ಮುಡ್ನೂರು ನೂಜಿ ನಿವಾಸಿ ಹಾಜಿರಾರವರ ಮನೆಯ ಮಣ್ಣಿನ ಗೋಡೆ ಕುಸಿದು ಹಾನಿ.
ಯಾವುದೇ ಪ್ರಾಣ ಹಾನಿಯಿಲ್ಲ ಅಮ್ಮುಂಜೆ ಗ್ರಾಮದ ಸುಲೋಚನ ಎಂಬವರ ಮನೆಯ ಮೇಲ್ಛಾವಣಿ ಕುಸಿದಿದೆ. ಬಂಟ್ವಾಳ ತಾಲ್ಲೂಕು ನರಿ ಕೊಂಬು ಗ್ರಾಮದ ಇಬ್ರಾಹಿಂ ಅವರ ಮನೆಯ ಹಿಂದಿನ ಗುಡ್ಡ ಕುಸಿಯುವ ಭೀತಿ ಇದ್ದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರೊಂದಿಗೆ ಜಂಟಿಯಾಗಿ ಸ್ಥಳ ಭೇಟಿ ಮಾಡಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಯಿತು. ಕಡೇಶ್ವಾಲ್ಯ ಗ್ರಾಮದ ಸೇರಾ ತನಿಯಪ್ಪ ರವರ ಮನೆಯ ಪಕ್ಕದ ಗುಡ್ಡೆಯ ಮಣ್ಣು ಕುಸಿದಿದ್ದು ಯಾವುದೇ ಹಾನಿ ಇರುವುದಿಲ್ಲ ಎಂದು ಕಂದಾಯ ಇಲಾಖೆ ಪ್ರಕಟನೆ ತಿಳಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…