ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹಿಂದೂ ಜಾಗರಣ ವೇದಿಕೆ ಹಿಂದೂ ಮುಖಂಡರಿಗೆ ಜೀವಬೆದರಿಕೆ

ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರಿಗೆ ಈ ಬೆದರಿಕೆ ಬಂದಿದ್ದು, ಬೆದರಿಕೆ ಆಡಿಯೋದಲ್ಲಿ ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ, ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ, ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ, ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದುಹಾಕಿದ್ದಾರೆ.

ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ, ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ, ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗೆ ಗೊತ್ತಿಲ್ಲ, ನಿನ್ನ ಕೊಂದ ರೀತಿಯನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ.

ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು, ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಮುಗಿಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ. ಈ ಕುರಿತಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇನ್ನು ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೀವ ಬೆದರಿಕೆ ಅಡಿಯೋ ಮೆಸೇಜ್ ಬಂದಿರುವ ಹಿನ್ನಲೆ ಉನ್ನತ ತನಿಖೆಗೆ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!