ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರಿಗೆ ಈ ಬೆದರಿಕೆ ಬಂದಿದ್ದು, ಬೆದರಿಕೆ ಆಡಿಯೋದಲ್ಲಿ ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ, ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ, ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ, ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದುಹಾಕಿದ್ದಾರೆ.
ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ, ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ, ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗೆ ಗೊತ್ತಿಲ್ಲ, ನಿನ್ನ ಕೊಂದ ರೀತಿಯನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ.
ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು, ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಮುಗಿಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ. ಈ ಕುರಿತಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇನ್ನು ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೀವ ಬೆದರಿಕೆ ಅಡಿಯೋ ಮೆಸೇಜ್ ಬಂದಿರುವ ಹಿನ್ನಲೆ ಉನ್ನತ ತನಿಖೆಗೆ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…