ಜನ ಮನದ ನಾಡಿ ಮಿಡಿತ

Advertisement

ಮೊಂಟೆಪದವು: ತಾಯಿಯ ಪಕ್ಕದಲ್ಲೇ ಕೈಯಾಡಿಸಿ, ಕಿರುಚುತ್ತಿದ್ದ ಮಗುಮ ಇನ್ನಿಲ್ಲ..!

ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಅಶ್ವಿನಿಯವರ ಇನ್ನೊಂದು ಮಗು ಕೂಡಾ ಮೃತಪಟ್ಟಿದೆ. ಈ ನಡುವೆ ಅಶ್ವಿನಿಯವರನ್ನು ರಕ್ಷಿಸಲಾಗಿದೆ. ಒಂದೂವರೆ ವರ್ಷ ಪ್ರಾಯದ ಮಗು ಆಯುಷ್ ಮೃತಪಟ್ಟಿದೆ.

ಕೆಲಹೊತ್ತಿನ ಮೊದಲು ಮೂರು ವರ್ಷದ ಮಗು ಆರ್ಯನ್ ಕೂಡಾ ಮೃತಪಟ್ಟಿತ್ತು. ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ ಸ್ಥಳದಲ್ಲೇ ಮೃತಪಟ್ಟಿದ್ದರು. ಕಾಂತಪ್ಪರ ಮಗ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ ಅವರ ಇಬ್ಬರು ಸಣ್ಣ ಮಕ್ಕಳು ಕುಸಿದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ಈ ಪೈಕಿ ಒಂದೂವರೆ ವರ್ಷ ಪ್ರಾಯದ ಮಗು ಆಯುಷ್‌ನನ್ನು ಮಧ್ಯಾಹ್ನದ ವೇಳೆ ರಕ್ಷಣಾ ತಂಡ ಅವೇಷಗಳಡಿಯಿಂದ ಹೊರ ತೆಗೆದಿತ್ತು. ಆದರೆ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು. ಬಳಿಕ ತಾಯಿ ಹಾಗೂ ಇನ್ನೊಂದು ಮಗು ಆಯುಷ್ ನನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿತ್ತು. ಅಶ್ವಿನಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ಬೆಳಗ್ಗೆ ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!