ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರ ದಾಳಿ; ದೋಣಿ, ಟಿಪ್ಪರ್ ಸಹಿತ ಓರ್ವನ ಬಂಧನ

ಉಡುಪಿ: ಅಕ್ರಮ ಮರಳು ದಂಧೆ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಓರ್ವ ಆರೋಪಿಯನ್ನು  ಬಂಧಿಸಿದ್ದಾರೆ.

ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ಕೆಲವು ಮಂದಿ ಹೊಳೆಯಿಂದ ಮರಳು ತೆಗೆದು ದೋಣಿಗೆ ತುಂಬಿಸುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಂಜಾನಾಯ್ಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಉದಯ ಮೆಂಡನ್‌ ಎಂಬಾತನನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ವ್ಯಕ್ತಿ ಸುನಿಲ್‌ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿತಗಳು ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸುತ್ತಿರುವುದು ಕಂಡುಬಂದಿದೆ.

 

ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ-1(ಅಂದಾಜು ಮೌಲ್ಯ-15,000/-), 1 ½ ಯುನಿಟ್ ಮರಳು(ಅಂದಾಜು ಮೌಲ್ಯ-5,000/-), KA20 C6070ನೇ 407 ಟಿಪ್ಪರ್ ವಾಹನ(ಅಂದಾಜು ಮೌಲ್ಯ-5,00,000/-) ಹಾಗೂ ಕಬ್ಬಿಣದ ಹಾರೆ-1, ಫೈಬರ ಬುಟ್ಟಿಗಳು-2 ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!