ಉಡುಪಿ: ಅಕ್ರಮ ಮರಳು ದಂಧೆ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ಕೆಲವು ಮಂದಿ ಹೊಳೆಯಿಂದ ಮರಳು ತೆಗೆದು ದೋಣಿಗೆ ತುಂಬಿಸುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಂಜಾನಾಯ್ಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ವ್ಯಕ್ತಿ ಸುನಿಲ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿತಗಳು ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸುತ್ತಿರುವುದು ಕಂಡುಬಂದಿದೆ.
ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ-1(ಅಂದಾಜು ಮೌಲ್ಯ-15,000/-), 1 ½ ಯುನಿಟ್ ಮರಳು(ಅಂದಾಜು ಮೌಲ್ಯ-5,000/-), KA20 C6070ನೇ 407 ಟಿಪ್ಪರ್ ವಾಹನ(ಅಂದಾಜು ಮೌಲ್ಯ-5,00,000/-) ಹಾಗೂ ಕಬ್ಬಿಣದ ಹಾರೆ-1, ಫೈಬರ ಬುಟ್ಟಿಗಳು-2 ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…