ಉಡುಪಿ: ಅಕ್ರಮ ಮರಳು ದಂಧೆ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ಕೆಲವು ಮಂದಿ ಹೊಳೆಯಿಂದ ಮರಳು ತೆಗೆದು ದೋಣಿಗೆ ತುಂಬಿಸುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಂಜಾನಾಯ್ಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ವ್ಯಕ್ತಿ ಸುನಿಲ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿತಗಳು ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸುತ್ತಿರುವುದು ಕಂಡುಬಂದಿದೆ.
ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ-1(ಅಂದಾಜು ಮೌಲ್ಯ-15,000/-), 1 ½ ಯುನಿಟ್ ಮರಳು(ಅಂದಾಜು ಮೌಲ್ಯ-5,000/-), KA20 C6070ನೇ 407 ಟಿಪ್ಪರ್ ವಾಹನ(ಅಂದಾಜು ಮೌಲ್ಯ-5,00,000/-) ಹಾಗೂ ಕಬ್ಬಿಣದ ಹಾರೆ-1, ಫೈಬರ ಬುಟ್ಟಿಗಳು-2 ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…