ಕರಾವಳಿ

ಎಸ್.ಪಿ. ಸೂಚನೆ ಹಿನ್ನಲೆ: ಕಡಬದಲ್ಲಿ ರಾತ್ರಿ ವೇಳೆ ಸಂಘಟನೆಗಳ ಪ್ರಮುಖರ ಮನೆಗೆ ಪೋಲಿಸರ ಭೇಟಿ

ಕಡಬ: ದ.ಕ. ಜಿಲ್ಲೆಗೆ ನೂತನ ಎಸ್.ಪಿ. ಯಾಗಿ ಡಾ. ಅರುಣ್ ಕೆ. ಅವರು ಆಗಮಿಸಿದ್ದು, ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈಗಾಗಲೇ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಅಪರಾದ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ಇವರ ಸೂಚನೆ ಮೇರೆಗೆ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ ಇದೀಗ ಪೋಲಿಸರು ಅಲರ್ಟ್ ಆಗಿದ್ದಾರೆ. ಈ ಮಧ್ಯೆ ಮೇ.೩೦ ಹಾಗೂ ಮೇ.೩೧ರಂದು ಹಾಗೂ ಜೂ.೧ರಂದು ರಾತ್ರಿ ವೇಳೆ ಕಡಬ ಎಸ್.ಐ. ಹಾಗೂ ಸಿಬ್ಬಂದಿಗಳು ಸಂಘಟನೆಯಲ್ಲಿ ಗುರುತಿಸಿಕೊಂಡಿರುವವರ ಮನೆಗೆ ತೆರಳಿ ಜಿ.ಪಿ.ಎಸ್. ಪೋಟೋ ಹಾಗೂ ಅವರನ್ನು ವಿಚಾರಿಸಿಕೊಂಡು ಹೋಗುತ್ತಿದ್ದು ಈ ಮದ್ಯೆ ಜೂ.೧ರ ರಾತ್ರಿ ಸುಮಾರು ೧೧ ಗಂಟೆಯ ವೇಳೆಗೆ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಹತ್ತು ಹದಿನೈದು ಮಂದಿ ಕಡಬ ಪೋಲಿಸ್ ಠಾಣೆಗೆ ಆಗಮಿಸಿ, ನಮ್ಮನ್ನು ಹುಡುಕಿಕೊಂಡು ನೀವು ಮನೆಗೆ ಬರುವುದು ಬೇಡ, ನಾವೇ ಠಾಣೆಗೆ ಬಂದಿದ್ದೇವೆ, ಎಷ್ಟು ಬೇಕಾದರೂ ಫೋಟೋ ತೆಗೆದುಕೊಳ್ಳಿ, ಯಾವ ರೀತಿಯ ತನಿಖೆ ಬೇಕಾದರೂ ಮಾಡಿ ಎಂದು ಹೇಳಿ ಠಾಣೆಯಲ್ಲಿ ಎದುರಲ್ಲಿ ಕುಳಿತುಕೊಂಡ ಘಟನೆ ನಡೆದಿದೆ. ವಿ.ಹಿಂ.ಪ. ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಪ್ರಮೋದ್ ನಂದುಗುರಿ, ಪ್ರಮುಖರಾದ ದೇವಿಪ್ರಸಾದ್ ಮರ್ದಾಳ, ಉಮೇಶ್ ಶೆಟ್ಟಿ ಸಾಯಿರಾಂ, ಮೋಹನ ಕೆರೆಕೋಡಿ ಸೇರಿದಂತೆ ಸುಮಾರು ೧೫ ಮಂದಿ ಆಗಮಿಸಿದ್ದು, ಈ ಸಂದರ್ಭದಲ್ಲಿ ಎಸ್.ಐ, ಅಭಿನಂದನ್ ಅವರು ನಾವು ಮೇಲಾಧಿಕಾರಿಗಳ ಆದೇಶ ಪಾಲಿಸುತ್ತಿದ್ದೇವೆ. ನಿಮ್ಮ ಬೇಡಿಕೆಗಳು ಇದ್ದರೆ ತಿಳಿಸಿ ನಾವು ಮೇಲಾಧಿಕಾರಿಗಳಿಗೆ ತಿಳಿಸುತ್ತೇವೆ, ಇವಾಗ ಇಲ್ಲಿಂದ ಹೋಗಿ ಎಂದರು. ಇದಕ್ಕೆ ಪ್ರಾರಂಭದಲ್ಲಿ ಒಪ್ಪದ ಪ್ರಮುಖರು ನಾವು ಬೆಳಿಗ್ಗೆಯವರೆಗೆ ಠಾಣೆಯಲ್ಲೆ ಇರುತ್ತೇವೆ, ನೀವು ನಾಳೆ ರಾತ್ರಿ ಕೂಡ ನಮ್ಮನ್ನು ಹುಡುಕಿಕೊಂಡು ಬರುತ್ತಿರಲ್ವ, ಮನೆಗೆ ಬಂದಾಗ ಸಹಜವಾಗಿ ಮನೆಯವರಿಗೂ ತೊಂದರೆ ಆಗುತ್ತದೆ, ನಾವು ಏನು ತಪ್ಪು ಮಾಡಿದ್ದೇವೆ, ನಮ್ಮನ್ನು ರೌಡಿಗಳಂತೆ ನೋಡುತ್ತಿರಲ್ಲವೇ, ನಾಳೆ ನಮ್ಮನ್ನು ಹುಡುಕಿಕೊಂಡು ಪುನಃ ಬರುವುದಿಲ್ಲ ಆದರೆ ನಾವು ತೆರಳುತ್ತೇವೆ ಎಂದು ಹೇಳಿದರು. ಇದಕ್ಕೆ ಎಸ್.ಐ.ಯವರು ಉತ್ತರಿಸಿ ನಾವು ಮೇಲಾಧಿಕಾರಿಗಳ ಆದೇಶ ಪಾಲಿಸುತ್ತೇವೆ ಬಿಟ್ಟರೆ ಬೇರೆ ಏನೂ ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು. ಬಳಿಕ ೧೨ ಗಂಟೆ ಸುಮಾರಿಗೆ ಕಾರ್ಯಕರ್ತರು ಠಾಣೆಯಿಂದ ತೆರಳಿದ್ದು ನಾಳೆ ಕುಟುಂಬ ಸಮೇತರಾಗಿ ಠಾಣೆಯಲ್ಲಿ ಕುಳಿತುಕೊಳ್ಳುತ್ತೇವೆ, ಆದೇಶ ಮಾಡಿದ ಎಸ್. ಪಿ.ಯವರಿಗೆ ತಿಳಿಸಿ ಎಂದು ಹೇಳಿ ತೆರಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮುಖ ಜಯಂತರವರು, ನಾಳೆ ಈ ಬಗ್ಗೆ ಚಿಂತನೆ ನಡೆಸುತ್ತೇವೆ. ಹಿಂದೂ ಕಾರ್ಯಕರ್ತರ ಮನೋಸ್ಥೆöÊರ್ಯ ಕಸಿಯುವ ಇಲಾಖೆಯ ಪ್ರಯತ್ನ ಫಲ ನೀಡದು, ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಸರಕಾರದ ವಿರುದ್ದ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ಕಾರ್ಯಕರ್ತರನ್ನು ಜಂಕ್ಷನ್‌ಗೆ ಕರೆಯುತ್ತಾರೆ
ಮೂರು ದಿನಗಳಿಂದ ದಿನಂಪ್ರತಿ ರಾತ್ರಿ ಮನೆಗೆ ಬರುವ ಪೋಲಿಸರು ಇದೀಗ ಸಮೀಪದ ಜಂಕ್ಷನ್‌ಗೆ ಕರೆಯುತ್ತಾರೆ, ನಾವು ಮನೆಯಿಂದ ಯಾವ ನಂಬಿಕೆಯಲ್ಲಿ ಬರಬೇಕು, ನಮ್ಮನ್ನು ಪೋಲಿಸರೇ ಕರೆದರೇ ಅಥವ ಇನ್ಯಾರೋ ಕರೆ ಮಾಡಿದ್ದಾರೆಯೇ ಎಂದು ನಮಗೆ ತಿಳಿಯುವುದಿಲ್ಲ, ಕಡಬ ತನಿಖಾ ಎಸ್.ಐ. ಅಕ್ಷಯ್ ರವರು ಕೇವಲ ಫೋಟೋ ತೆಗೆಯುವುದನ್ನು ಬಿಟ್ಟು ಉಢಾಫೆಯಾಗಿ ಮಾತನಾಡುತ್ತಾರೆ, ಈ ರೀತಿಯಾದರೆ ಮುಂದೆ ಯಾವ ರೀತಿ ಇರಬಹುದು, ಇದಕ್ಕಾಗಿ ಮನೆಯಲ್ಲಿ ನೀವು ಸ್ಟೇಷನ್ ನಲ್ಲಿಯೇ ಕುಳಿತುಕೊಳ್ಳಿ ಎಂದು ಕಳಿಸಿದ್ದಾರೆ ಎಂದು ಜಯಂತ್ ರವರು ಹೇಳಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

2 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

2 days ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

2 days ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

2 days ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

3 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

3 days ago