ಇತರೆ

ಉಡುಪಿ: ಹಿಂದೂ ಮುಖಂಡರ ಮನೆಗಳಿಗೆ ತೆರಳಿ ಅವರನ್ನು ಬಂಧಿಸುತ್ತಿರುವ ಪೊಲೀಸರ ಕ್ರಮ ಸರಿಯಲ್ಲ ; ಶಾಸಕ ವಿ. ಸುನಿಲ್ ಕುಮಾರ್

ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಚಿಂತೆ ವ್ಯಕ್ತಪಡಿಸಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ನೇತೃತ್ವದ ಐದು ಮಂದಿ ಶಾಸಕರ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಸೋಮವಾರ ಭೇಟಿ ಮಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಕುರಿತು ಮಾತುಕತೆ ನಡೆಸಿತು. ಇದೇ ವೇಳೆ ಶಾಸಕರು ಕಾನೂನಿಗೆ ಸಂಬ0ಧಿಸಿ ಜಿಲ್ಲಾಡಳಿತ ತೆಗೆದುಕೊಳ್ಳುತ್ತಿರುವ ಕ್ರಮದ ಬಗ್ಗೆ ತೀವೃ ಅಸಮಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪೊಲೀಸರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿರುವ ಕೆಲವು ಕ್ರಮಗಳನ್ನು ಖಂಡಿಸಿದ ಶಾಸಕರು, ಜಿಲ್ಲೆಯಲ್ಲಿ ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳಿಗೆ ತೆರಳಿ ಅವರನ್ನು ಬಂಧಿಸುತ್ತಿರುವ ಪೊಲೀಸರ ಕ್ರಮವು ಸರಿಯಲ್ಲ.”ಹಿಂದೂ ಮುಖಂಡರನ್ನು ಗುರಿಯಾಗಿಸಿ ನಡೆಸುತ್ತಿರುವ ಈ ರೀತಿಯ ದಾಳಿ ಮತ್ತು ಬಂಧನಗಳು ಏಕಪಕ್ಷೀಯವಾಗಿ ಪರಿಣಮಿಸುತ್ತಿದ್ದು, ಸಮಾಜದಲ್ಲಿ ಪ್ರಚೋದನೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಶಾಸಕರು ಎಸ್ ಪಿ ಯವರ ಗಮನಕ್ಕೆ ತಂದರು. ಹಿಂದೂಗಳನ್ನೆ ಗುರಿಯಾಗಿಸುವ “ಈ ಕ್ರಮವು ನ್ಯಾಯಾತೀತವಾಗಿದ್ದು, ಒತ್ತಾಯದೊಂದಿಗೆ ಇಂತಹ ಕಾನೂನು ಬಾಹಿರ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ಆಗ್ರಹಿಸಿದರು. ಇದೆ ವೇಳೆ, ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಮಟ್ಕಾ, ಜುಗಾರಿ, ಮತ್ತು ಇತರ ಅಕ್ರಮ ಚಟುವಟಿಕೆಗಳತ್ತ ಕೂಡ ಗಮನ ಸೆಳೆದ ಶಾಸಕರು, ಜಿಲ್ಲೆಯಲ್ಲಿ ಮಟ್ಕಾ ದಂಧೆ, ಜುಗಾರಿ ಇನ್ನಿತರ ಗಂಭಿರ ಕಾನೂನು ಬಾಹಿರ ಚಟುವಟಿಕೆ ಮಿತಿಮೀರಿ ನಡೆಯುತಿದ್ದು ಅವರ ವಿರುದ್ಧ ಅಗತ್ಯ ಕ್ರಮ ಜರಗಿಸುವಂತೆ ಆಗ್ರಹಿಸಿದರು.

ಜಿಲ್ಲೆಯಲ್ಲಿ ಶಾಂತಿ, ಸಮಾಧಾನ ಮತ್ತು ಸಾಮಾಜಿಕ ಸಾಮರಸ್ಯ ಕಾಪಾಡುವುದು ಬಹುಮುಖ್ಯವಾದ ವಿಷಯವಾಗಿದ್ದು, ಒಂದು ನಿರ್ದಿಷ್ಟ ಸಮುದಾಯದ ವಿರುದ್ಧದ ಕ್ರಮಗಳು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂಬ ಎಚ್ಚರಿಕೆಯನ್ನು ಶಾಸಕರ ನಿಯೋಗ ಎಸ್ ಪಿ ಅವರಿಗೆ ನೀಡಿದೆ “ಪೊಲೀಸರು ಪಕ್ಷಪಾತಿ ನಡೆ ತಾಳಿದರೆ, ಸಾರ್ವಜನಿಕರ ನಂಬಿಕೆಗೆ ಧಕ್ಕೆಯಾಗುತ್ತದೆ. ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ ಒದಗಿಸುವ ಪ್ರಾಮಾಣಿಕತೆ ಅಗತ್ಯದಂತೆ ಕಾರ್ಯನಿರ್ವಹಿಸಲು ಸಲಹೆ ನೀಡಿದ ಅವರು ಇದೇ ರೀತಿ ಒಂದು ಸಮುದಾಯವನ್ನೆ ಗುರಿಯಾಗಿಸಿ ಕ್ರಮಗಳು ಮುಂದುವರೆದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾದಿತು ಎನ್ನುವ ಎಚ್ಚರಿಕೆಯನ್ನು ಅಧಿಕಾರಿಗಳ ಮುಂದೆ ವ್ಯಕ್ತಪಡಿಸಿದರು. ಇದೇ ವೇಳೆ ಶಾಸಕರ ತಂಡ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಸಂಬ0ಧಿಸಿ ವಿವಿಧ ವಿಚಾರಗಳ ಬಗ್ಗೆ ವರಿಷ್ಠಾಧಿಕಾರಿಯವರ ಜೊತೆ ಮಾತು ಕತೆ ನಡೆಸಿ ಅಗತ್ಯ ಕ್ರಮಕ್ಕೆ ಆಗ್ರಹಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

1 hour ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

1 hour ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

1 hour ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

22 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

23 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

23 hours ago