ಕಳೆದ 2-3 ತಿಂಗಳಿನಿಂದ ಮಧುಮೇಹ ಚುಚ್ಚುಮದ್ದು/ಔಷಧಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ದೊರಕುತ್ತಿಲ್ಲ. ಈ ಸಮಸ್ಯೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿಯೂ ಇದ್ದಿರಬಹುದು. ಈ ದುಬಾರಿ ಬೆಲೆಯ ಚುಚ್ಚುಮದ್ದು/ಔಷಧಿ ಖರೀದಿಸಲು ಬಡವರಿಗೆ ಆಗುತ್ತಿಲ್ಲ. ಆದುದರಿಂದ ಅತಿ ತುರ್ತಾಗಿ ಎಲ್ಲಾ ಆಸ್ಪತ್ರೆಗಳಲ್ಲೂ ಮಧುಮೇಹ ಚುಚ್ಚುಮದ್ದು/ಔಷಧಿ ಸರಬರಾಜು ಮಾಡಿ ಸದಾ ಕಾಲ ಎಲ್ಲಾ ಕಡೆಗಳಲ್ಲಿ ಲಭ್ಯ ಇರುವಂತೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನಕ್ಕೆ ತಂದಿರುತ್ತಾರೆ.
ಇದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಧುಮೇಹ ಟೈಪ್- 21ಗೆ ಇನ್ಸುಲಿನ್ ಚುಚ್ಚು ಮದ್ದುಗಳು ಪ್ರಾಥಮಿಕ ಆರೋಗ್ಯ, ಕೇಂದ್ರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಗಳು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಇನ್ಸುಲಿನ್ ಚುಚ್ಚುಮದ್ದುಗಳ ಲಭ್ಯವಿರುತ್ತದೆ. ಮಧುಮೇಹ ಟೈಪ್ -1 ಗೆ ದಿನಾಂಕ: 03-12-2022 ರಂದು ನಡೆದ ಥೆರಪೇಟಿಕ್ ಕಮೀಟಿಯಲ್ಲಿ Essential dug list ನಲ್ಲಿ, 2023-24 ನೇ ಸಾಲಿನಲ್ಲಿ ಸೇರಿಸಲು ಅನುಮೋದನೆ ನೀಡಲಾಗಿರುತ್ತದೆ. ಹಾಗೂ E-Procutenent ನ್ನು ಈ ಆರ್ಥಿಕ ವರ್ಷದಲ್ಲಿ ಕೈಗೊಳ್ಳಲಾಗುವುದು. ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಂದ ಇ-ಔಷಧ ಮುಖಾಂತರ ಬೇಡಿಕೆ ಬಂದಲ್ಲಿ KSMSCL ಮುಖಾಂತರ ಖರೀದಿಸಿ ಸರಬರಾಜು ಮಾಡಲಾಗುವುದು ಎಂದು ತಿಳಿಸಿರುತ್ತಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…