ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ: ತನ್ನೂರ ಶಾಲೆಯ ಪುಟಾಣಿಗಳ ವಿಭಾಗವನ್ನ ದತ್ತು ಪಡೆದ ಕೊಡುಗೈದಾನಿ ಡಾ| ಕೆ ಸದಾಶಿವ ಶೆಟ್ಟಿ

ಇವತ್ತಿನ ಕಾಲಮಾನ ಜ್ಞಾನ ಆರ್ಥಿಕತೆಯದ್ದು, ಇದಕ್ಕೆ ಬುನಾದಿ ಶಿಕ್ಷಣ, ಗುಣ ಮಟ್ಟದ ಶಿಕ್ಷಣ ತಳ ಮಟ್ಟದಲ್ಲಿ ಸಿಕ್ಕಿದರೆ ಉನ್ನತ ಶಿಕ್ಷಣ ಕೂಡಾ ಉತ್ಕೃಷ್ಟ ವಿದ್ಯಾಸಂಸ್ಥೆಗಳಲ್ಲಿ ಪಡೆಯುವುದಕ್ಕೆ ಸಾಧ್ಯವಾಗುತ್ತದೆ. ಇಂತಹ ಪ್ರಯತ್ನವೊಂದಕ್ಕೆ ದಾನಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಕೈ ಹಾಕಿದ್ದಾರೆ.


ಸಮಾಜದಲ್ಲಿ ಕಷ್ಟ ಕಾರ್ಪಣ್ಯಗಳಿಂದ ಬಳಲಿ ಬೆಂಡಾಗಿರುವ ಅದೆಷ್ಟೋ ಜೀವಗಳಿವೆ. ಬಡತನ ಇನ್ನಷ್ಟು ಅವರ ಜೀವ ಹಿಂಡುತ್ತದೆ. ಯಾವುದಾದರೂ ಕಾಣುವ ಕೈಗಳ ಸಹಾಯಕ್ಕೆ ಕಾಯುತ್ತವೆ. ಆದರೆ ಎಲ್ಲರೂ ಮರುಗುವರೇ ಹೊರತು ಸಹಾಯಕ್ಕಾಗಿ ಮುಂದೆ ಬರುವುದು ವಿರಳ. ಇಂತಹ ಸಂದರ್ಭಗಳಲ್ಲಿ ನಮಗೆ ಹೊಳೆಯುವ ಹೆಸರೆಂದರೆ ಅದು ಡಾ. ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ. ತಮ್ಮ ನಿಸ್ವಾರ್ಥವಾದ ಸಮಾಜ ಸೇವೆ ಇಂದು ಅವರನ್ನು ಬಹಳ ಎತ್ತರಕ್ಕೆ ತಂದು ನಿಲ್ಲಿಸಿದೆ. ಜಾತಿ-ಮತ-ಧರ್ಮ ಎನ್ನುವ ಯಾವುದೇ ಭೇದವಿಲ್ಲದೆ ಸಮಾಜದಲ್ಲಿನ ಅಶಕ್ತರಿಗೆ ದಾರಿ ದೀಪವಾಗಿ ಬೆಳಗುತ್ತಿದ್ದಾರೆ.

ರಾಜಕೀಯ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿದ ತುಳುವರೆ ಕರ್ಣೆ ತಾವು ಬೆಳೆದ ಹಾದಿಯನ್ನು ಮರೆಯಲಿಲ್ಲ.ತನ್ನೂರಾದ ಕುಳೂರಿನ ಜನತೆಯ ದಾರಿದೀಪವಾಗಿ, ಹುಟ್ಟೂರ ಶಾಲೆಯ ಅಭಿವೃದ್ಧಿಯ ಹರಿಕಾರನಾಗಿ ಗುರುತಿಸಿಕೊಂಡಿರುವ ಮಹಾದಾನಿ ಡಾ. ಕನ್ಯಾನ ಸದಾಶಿವ ಶೆಟ್ಟಿಯವರು ತಾನು ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟಂತೆ ಹತ್ತು ಹಲವು ಕೊಡುಗೆಗಳನ್ನು ನೀಡಿ ಮಾದರಿಯಾಗಿದ್ದಾರೆ. ಈ ವರ್ಷ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ., ಯು.ಕೆ.ಜಿ. ವಿಭಾಗವನ್ನು 5 ವರ್ಷಗಳ ಕಾಲ ದತ್ತು ಸ್ವೀಕಾರ ಮಾಡುವ ಮೂಲಕ ಕುಳೂರಿನ ಜನಮಾನಸದಲ್ಲಿ ಅಜರಾಮರವಾಗಿರುವವರು. ತೀರಾ ಗ್ರಾಮೀಣ ಭಾಗದಲ್ಲಿರುವ ತಾನು ಕಲಿತ ಸರಕಾರಿ ಶಾಲೆಯು ಇನ್ನಷ್ಟು ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಇಂದು ಶಾಲಾ ಪ್ರವೇಶೋತ್ಸವದ ಸಂದರ್ಭದಲ್ಲಿ ಪ್ರೀ ಪ್ರೈಮರಿ ವಿಭಾಗವನ್ನು ಮುಂದಿನ 5 ವರ್ಷಗಳ ಕಾಲ ದತ್ತು ಸ್ವೀಕಾರ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಸಂದರ್ಭದಲ್ಲಿ ಶಾಲಾ ಪರವಾಗಿ ಅವರನ್ನು ಗೌರವಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!