ಇತರೆ

ಮಂಜೇಶ್ವರ: ತನ್ನೂರ ಶಾಲೆಯ ಪುಟಾಣಿಗಳ ವಿಭಾಗವನ್ನ ದತ್ತು ಪಡೆದ ಕೊಡುಗೈದಾನಿ ಡಾ| ಕೆ ಸದಾಶಿವ ಶೆಟ್ಟಿ

ಇವತ್ತಿನ ಕಾಲಮಾನ ಜ್ಞಾನ ಆರ್ಥಿಕತೆಯದ್ದು, ಇದಕ್ಕೆ ಬುನಾದಿ ಶಿಕ್ಷಣ, ಗುಣ ಮಟ್ಟದ ಶಿಕ್ಷಣ ತಳ ಮಟ್ಟದಲ್ಲಿ ಸಿಕ್ಕಿದರೆ ಉನ್ನತ ಶಿಕ್ಷಣ ಕೂಡಾ ಉತ್ಕೃಷ್ಟ ವಿದ್ಯಾಸಂಸ್ಥೆಗಳಲ್ಲಿ ಪಡೆಯುವುದಕ್ಕೆ ಸಾಧ್ಯವಾಗುತ್ತದೆ. ಇಂತಹ ಪ್ರಯತ್ನವೊಂದಕ್ಕೆ ದಾನಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಕೈ ಹಾಕಿದ್ದಾರೆ.


ಸಮಾಜದಲ್ಲಿ ಕಷ್ಟ ಕಾರ್ಪಣ್ಯಗಳಿಂದ ಬಳಲಿ ಬೆಂಡಾಗಿರುವ ಅದೆಷ್ಟೋ ಜೀವಗಳಿವೆ. ಬಡತನ ಇನ್ನಷ್ಟು ಅವರ ಜೀವ ಹಿಂಡುತ್ತದೆ. ಯಾವುದಾದರೂ ಕಾಣುವ ಕೈಗಳ ಸಹಾಯಕ್ಕೆ ಕಾಯುತ್ತವೆ. ಆದರೆ ಎಲ್ಲರೂ ಮರುಗುವರೇ ಹೊರತು ಸಹಾಯಕ್ಕಾಗಿ ಮುಂದೆ ಬರುವುದು ವಿರಳ. ಇಂತಹ ಸಂದರ್ಭಗಳಲ್ಲಿ ನಮಗೆ ಹೊಳೆಯುವ ಹೆಸರೆಂದರೆ ಅದು ಡಾ. ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ. ತಮ್ಮ ನಿಸ್ವಾರ್ಥವಾದ ಸಮಾಜ ಸೇವೆ ಇಂದು ಅವರನ್ನು ಬಹಳ ಎತ್ತರಕ್ಕೆ ತಂದು ನಿಲ್ಲಿಸಿದೆ. ಜಾತಿ-ಮತ-ಧರ್ಮ ಎನ್ನುವ ಯಾವುದೇ ಭೇದವಿಲ್ಲದೆ ಸಮಾಜದಲ್ಲಿನ ಅಶಕ್ತರಿಗೆ ದಾರಿ ದೀಪವಾಗಿ ಬೆಳಗುತ್ತಿದ್ದಾರೆ.

ರಾಜಕೀಯ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿದ ತುಳುವರೆ ಕರ್ಣೆ ತಾವು ಬೆಳೆದ ಹಾದಿಯನ್ನು ಮರೆಯಲಿಲ್ಲ.ತನ್ನೂರಾದ ಕುಳೂರಿನ ಜನತೆಯ ದಾರಿದೀಪವಾಗಿ, ಹುಟ್ಟೂರ ಶಾಲೆಯ ಅಭಿವೃದ್ಧಿಯ ಹರಿಕಾರನಾಗಿ ಗುರುತಿಸಿಕೊಂಡಿರುವ ಮಹಾದಾನಿ ಡಾ. ಕನ್ಯಾನ ಸದಾಶಿವ ಶೆಟ್ಟಿಯವರು ತಾನು ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟಂತೆ ಹತ್ತು ಹಲವು ಕೊಡುಗೆಗಳನ್ನು ನೀಡಿ ಮಾದರಿಯಾಗಿದ್ದಾರೆ. ಈ ವರ್ಷ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ., ಯು.ಕೆ.ಜಿ. ವಿಭಾಗವನ್ನು 5 ವರ್ಷಗಳ ಕಾಲ ದತ್ತು ಸ್ವೀಕಾರ ಮಾಡುವ ಮೂಲಕ ಕುಳೂರಿನ ಜನಮಾನಸದಲ್ಲಿ ಅಜರಾಮರವಾಗಿರುವವರು. ತೀರಾ ಗ್ರಾಮೀಣ ಭಾಗದಲ್ಲಿರುವ ತಾನು ಕಲಿತ ಸರಕಾರಿ ಶಾಲೆಯು ಇನ್ನಷ್ಟು ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಇಂದು ಶಾಲಾ ಪ್ರವೇಶೋತ್ಸವದ ಸಂದರ್ಭದಲ್ಲಿ ಪ್ರೀ ಪ್ರೈಮರಿ ವಿಭಾಗವನ್ನು ಮುಂದಿನ 5 ವರ್ಷಗಳ ಕಾಲ ದತ್ತು ಸ್ವೀಕಾರ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಸಂದರ್ಭದಲ್ಲಿ ಶಾಲಾ ಪರವಾಗಿ ಅವರನ್ನು ಗೌರವಿಸಲಾಯಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…

10 hours ago

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…

10 hours ago

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…

11 hours ago

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್‌ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು…

11 hours ago

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…

13 hours ago

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…

13 hours ago