ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಕಾಲ ಸುರಿದ ಮಳೆಯಿಂದ ಆಸ್ತಿಪಾಸ್ತಿ ನಷ್ಟದ ಜತೆಗೆ ಪ್ರಾಣಹಾನಿಯಾಗಿದೆ. ಈ ನಡುವೆ ಸ್ಥಳೀಯ ಶಾಸಕರು ಪರಿಹಾರ ಕಾರ್ಯ ಸೇರಿದಂತೆ ಅಭಿವೃದ್ಧಿಯಲ್ಲಿ ಸರಕಾರಕ್ಕೆ ಬೆಂಬಲ ನೀಡುವುದು ಬಿಟ್ಟು ಟೀಕೆಯಲ್ಲಿ ನಿರತರಾಗಿದ್ದಾರೆ.
ಇನ್ನಾದರೂ ಕಪಟ ರಾಜಕಾರಣ ಬದಿಗಿಟ್ಟು ಸರಕಾರದ ಒಳ್ಳೆಯ ಕಾರ್ಯದಲ್ಲಿ ಬೆಂಬಲಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪದ್ಮರಾಜ್, ದ.ಕ. ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು, ಮಳೆ ಹಾನಿ ಸಾಕಷ್ಟು ಸಂಕಷ್ಟಗಳಿಗೆ ಕಾರಣವಾಗಿದೆ. ಮಳೆಹಾನಿಯಾಗಿ ಪ್ರಾಣ ಕಳೆದುಕೊಂಡವರ ಮನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರ ನಿರ್ದೇಶದನ ಮೇರೆಗೆ ಭೇಟಿ ನೀಡಿರುವ ಉಸ್ತುವಾರಿ ಸಚಿವರು ಪರಿಹಾರ ನೀಡುವ ಕಾರ್ಯವನ್ನು ಅಧಿಕಾರಿಗಳ ಮುತುವರ್ಜಿಯಲ್ಲಿ ನೆರವೇರಿಸಿದ್ದಾರೆ ಎಂದಿದ್ದಾರೆ. ಆದರೆ ಶಾಸಕರು ಮಾತ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ ನಿರತರಾಗಿದ್ದಾರೆ. ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿದ ವೇಳೆ ಮಳೆಯಿಂದ ಹನಿಯಾದವರಿಗೆ ಪರಿಹಾರ ಹಾಗೂ ಇತರ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಶಾಸಕರಿಗೆ ಚರ್ಚಿಸಲು ತಡೆಯಾಗಿರುವ ವಿಷಯವಾದರೂ ಏನು ಎಂದು ಪದ್ಮರಾಜ್ ಪ್ರಶ್ನಿಸಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…