ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಕಾಲ ಸುರಿದ ಮಳೆಯಿಂದ ಆಸ್ತಿಪಾಸ್ತಿ ನಷ್ಟದ ಜತೆಗೆ ಪ್ರಾಣಹಾನಿಯಾಗಿದೆ. ಈ ನಡುವೆ ಸ್ಥಳೀಯ ಶಾಸಕರು ಪರಿಹಾರ ಕಾರ್ಯ ಸೇರಿದಂತೆ ಅಭಿವೃದ್ಧಿಯಲ್ಲಿ ಸರಕಾರಕ್ಕೆ ಬೆಂಬಲ ನೀಡುವುದು ಬಿಟ್ಟು ಟೀಕೆಯಲ್ಲಿ ನಿರತರಾಗಿದ್ದಾರೆ.
ಇನ್ನಾದರೂ ಕಪಟ ರಾಜಕಾರಣ ಬದಿಗಿಟ್ಟು ಸರಕಾರದ ಒಳ್ಳೆಯ ಕಾರ್ಯದಲ್ಲಿ ಬೆಂಬಲಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪದ್ಮರಾಜ್, ದ.ಕ. ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು, ಮಳೆ ಹಾನಿ ಸಾಕಷ್ಟು ಸಂಕಷ್ಟಗಳಿಗೆ ಕಾರಣವಾಗಿದೆ. ಮಳೆಹಾನಿಯಾಗಿ ಪ್ರಾಣ ಕಳೆದುಕೊಂಡವರ ಮನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರ ನಿರ್ದೇಶದನ ಮೇರೆಗೆ ಭೇಟಿ ನೀಡಿರುವ ಉಸ್ತುವಾರಿ ಸಚಿವರು ಪರಿಹಾರ ನೀಡುವ ಕಾರ್ಯವನ್ನು ಅಧಿಕಾರಿಗಳ ಮುತುವರ್ಜಿಯಲ್ಲಿ ನೆರವೇರಿಸಿದ್ದಾರೆ ಎಂದಿದ್ದಾರೆ. ಆದರೆ ಶಾಸಕರು ಮಾತ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ ನಿರತರಾಗಿದ್ದಾರೆ. ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿದ ವೇಳೆ ಮಳೆಯಿಂದ ಹನಿಯಾದವರಿಗೆ ಪರಿಹಾರ ಹಾಗೂ ಇತರ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಶಾಸಕರಿಗೆ ಚರ್ಚಿಸಲು ತಡೆಯಾಗಿರುವ ವಿಷಯವಾದರೂ ಏನು ಎಂದು ಪದ್ಮರಾಜ್ ಪ್ರಶ್ನಿಸಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…