ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಕಾಲ ಸುರಿದ ಮಳೆಯಿಂದ ಆಸ್ತಿಪಾಸ್ತಿ ನಷ್ಟದ ಜತೆಗೆ ಪ್ರಾಣಹಾನಿಯಾಗಿದೆ. ಈ ನಡುವೆ ಸ್ಥಳೀಯ ಶಾಸಕರು ಪರಿಹಾರ ಕಾರ್ಯ ಸೇರಿದಂತೆ ಅಭಿವೃದ್ಧಿಯಲ್ಲಿ ಸರಕಾರಕ್ಕೆ ಬೆಂಬಲ ನೀಡುವುದು ಬಿಟ್ಟು ಟೀಕೆಯಲ್ಲಿ ನಿರತರಾಗಿದ್ದಾರೆ.
ಇನ್ನಾದರೂ ಕಪಟ ರಾಜಕಾರಣ ಬದಿಗಿಟ್ಟು ಸರಕಾರದ ಒಳ್ಳೆಯ ಕಾರ್ಯದಲ್ಲಿ ಬೆಂಬಲಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪದ್ಮರಾಜ್, ದ.ಕ. ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು, ಮಳೆ ಹಾನಿ ಸಾಕಷ್ಟು ಸಂಕಷ್ಟಗಳಿಗೆ ಕಾರಣವಾಗಿದೆ. ಮಳೆಹಾನಿಯಾಗಿ ಪ್ರಾಣ ಕಳೆದುಕೊಂಡವರ ಮನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರ ನಿರ್ದೇಶದನ ಮೇರೆಗೆ ಭೇಟಿ ನೀಡಿರುವ ಉಸ್ತುವಾರಿ ಸಚಿವರು ಪರಿಹಾರ ನೀಡುವ ಕಾರ್ಯವನ್ನು ಅಧಿಕಾರಿಗಳ ಮುತುವರ್ಜಿಯಲ್ಲಿ ನೆರವೇರಿಸಿದ್ದಾರೆ ಎಂದಿದ್ದಾರೆ. ಆದರೆ ಶಾಸಕರು ಮಾತ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ ನಿರತರಾಗಿದ್ದಾರೆ. ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿದ ವೇಳೆ ಮಳೆಯಿಂದ ಹನಿಯಾದವರಿಗೆ ಪರಿಹಾರ ಹಾಗೂ ಇತರ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಶಾಸಕರಿಗೆ ಚರ್ಚಿಸಲು ತಡೆಯಾಗಿರುವ ವಿಷಯವಾದರೂ ಏನು ಎಂದು ಪದ್ಮರಾಜ್ ಪ್ರಶ್ನಿಸಿದ್ರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…