ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ.ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ.
ಅದರ ಬದಲು ಎಲ್ಇಡಿ ಪರದೆ ಮೂಲಕ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ. ಪ್ರತಿ ಶನಿವಾರ ಮತ್ತು ಭಾನುವಾರ ಉಡುಪಿಯ ಪಿಪಿಸಿ ಆಡಿಟೋರಿಯಮ್ ನಲ್ಲಿ ಪ್ರದರ್ಶನ ಮಾಡಲಾಗುವುದು. ಶೋ ಮುಗಿದ ಬಳಿಕ ಕೆರಿಯರ್ ಗೈಡೆನ್ಸ್ ನಡೆಯಲಿದ್ದು, ಸಂದರ್ಶನದ ಭಯ ಹಾಗೂ ಪರೀಕ್ಕೆ ಭಯದ ಬಗ್ಗೆ ಇತರ ಪ್ರಶ್ನೆಗಳೇನಾದರೂ ಇದ್ದಲ್ಲಿ ಉತ್ತರಿಸಲಾಗುವುದು. ಇಲ್ಲದಿದ್ದಲ್ಲಿ ಬೇಕಾದ ವಿದ್ಯಾರ್ಥಿಗಳಿಗೆ, ಸಿನೆಮಾದಲ್ಲಿ ಹೇಳಲಾದ ಸ್ಪಡಿ ಟೆಕ್ನಿಕ್ಸ್ಗಳನ್ನು ಸವಿಸ್ತಾರವಾಗಿ ವಿವರಿಸಲಾಗುವುದು ಎಂದ್ರು. ಇದು ‘ಮಕ್ಕಳು ಆತ್ಮಹತ್ಯೆ ಮಾಡುವುದು, ‘ಮನೆ ಬಿಟ್ಟು ಓಡಿ ಹೋಗುವುದು ಇಂತಹ ನಾನಾ ರೀತಿಯ ಸಮಸ್ಯೆಗಳನ್ನು ತಂದೊಡ್ಡುವ ಪರೀಕ್ಷೆ ಹೆದರಿಕೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ತಯಾರಿಸಿರುವ ಶೈಕ್ಷಣಿಕ-ಸಾಮಾಜಿಕ ಚಲನಚಿತ್ರವಾಗಿದೆ. ಮನೆಯಲ್ಲಿಯೇ ಕುಳಿತು ನೋಡಲು ಅನುಕೂಲವಾಗುವಂತೆ ಪ್ರದರ್ಶಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕಲಾವಿದರಾದ ಅಶ್ವಿನಿ ಶೀತಲ್, ಪ್ರದೀಪ್ ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…