ಕಾಮಿಡಿ ಕಿಲಾಡಿಗಳು ಶೋ ಮೂಲಕ ಮನೆಮಾತಾಗಿದ್ದ ನಟ ರಾಕೇಶ್ ಪೂಜಾರಿ ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ರು.
ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ಕೂಡ ರಾಕೇಶ್ ಪೂಜಾರಿ ಅವರು ನಟಿಸುತ್ತಿದ್ರು. ಆದರೆ ರಾಕೇಶ್ ನಿಧನರಾದಾಗ ಈ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು. ಈಗ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.ರಾಕೇಶ್ ಪೂಜಾರಿ ನಿಧನರಾಗಿ 21 ದಿನಗಳು ಕಳೆದ ಬಳಿಕ ಅವರ ಮನೆಗೆ ರಿಷಬ್ ಶೆಟ್ಟಿ ಬಂದಿದ್ದಾರೆ. ರಾಕೇಶ್ ಪೂಜಾರಿ ಕುಟುಂಬಸ್ಥರಿಗೆ ರಿಷಬ್ ಶೆಟ್ಟಿ ಹಾಗು ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಂತ್ವಾನ ಹೇಳಿದ್ದಾರೆ. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ.
ರಿಷಬ್ ಶೆಟ್ಟಿ ಅವರು ಕಾಂತಾರ: ಚಾಪ್ಟರ್ 1 ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಹಾಗೂ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೂ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್ನಲ್ಲಿ ಕೂಡ ಅವರು ಪಾಲ್ಗೊಂಡಿದ್ರು. ಈ ಸಿನಿಮಾ ಮೇಲೆ ಅವರು ಸಖತ್ ಭರವಸೆ ಇಟ್ಟುಕೊಂಡಿದ್ರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನ ಹೊಂದಿದ್ದಾರೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…