ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯ ಮೊಹಲ್ಲಾದಲ್ಲಿ ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ 4 ಎತ್ತುಗಳನ್ನು ಕಟ್ಟಿಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಉಸ್ಮಾನಿಯಾ ಮೊಹಲ್ಲಾದ ಮಹಮ್ಮದ್ ಸಾಜೀದ್ ಬಂಧಿತ ಆರೋಪಿಯಾಗಿದ್ದಾನೆ. ಈತ ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡಿ ಮಾರಾಟ ಮಾಡಲು 4 ಎತ್ತುಗಳನ್ನು ಅಕ್ರಮವಾಗಿ ತಂದು ಕಟ್ಟಿ ಹಾಕಿದ್ದ.

ಪೊಲೀಸರು ದಾಳಿ ನಡೆಸಿ ಅವುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.



