ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಈ ಬಾರಿ ಕೊಳೆ ರೋಗ ಬಾಧೆ ತಡೆಯಲು ಔಷಧಿ ಸಿಂಪಡಿಸುವುದಕ್ಕೆ ಎಡೆಬಿಡದೆ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ.
ಈ ವರ್ಷ ಮುಂಗಾರು ಮಳೆ ನಿರೀಕ್ಷೆಗಿಂತ ಮೊದಲೇ ಆರಂಭವಾಗಿರುವುದರಿ0ದ ರೈತರಿಗೆ ಅಡಿಕೆ ಕೊಳೆರೋಗಕ್ಕೆ ಸಂಬ0ಧಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಅಡಿಕೆ ತೋಟಗಳನ್ನು ಹೊಂದಿರುವ ಕೃಷಿಕರು ಇದುವರೆಗೆ ಮೇ ತಿಂಗಳ ಕೊನೆಯಲ್ಲಿ ಮೊದಲ ಸುತ್ತಿನ ಔಷಧಿ ಸಿಂಪರಣೆಯನ್ನು ಮಾಡುತ್ತಿದ್ದರು. ಈ ಬಾರಿ ಮೇ ತಿಂಗಳ ಕೊನೆಯಲ್ಲಿ ಮಳೆಬಂದಿರುವುದರಿ0ದ ಔಷಧಿ ಸಿಂಪರಣೆ ಸಾಧ್ಯವಾಗಿಲ್ಲ. ಮಳೆಗಾಲದಲ್ಲಿ ಅಡಿಕೆ ಬೆಳೆಯನ್ನು ಶಿಲೀಂಧ್ರಗಳಿ0ದ ಹರಡುವ ಕೊಳೆ ರೋಗ ಭಾರೀ ಪ್ರಮಾಣದಲ್ಲಿ ನಾಶ ಮಾಡುತ್ತದೆ. ಇದಕ್ಕೆ ಪರಿಹಾರವಾಗಿ ಬೋರ್ಡೋ ದ್ರಾವಣವನ್ನು ಔಷಧಿಯಾಗಿ ಸಿಂಪಡಿಸಲಾಗುತ್ತದೆ.
ಮಳೆಗಾಲ ಆರಂಭಕ್ಕೆ ಮೊದಲೇ ಒಂದು ಬಾರಿ ಈ ದ್ರಾವಣ ಸಿಂಪರಿಸಿದರೆ ಬಳಿಕ 2-3 ಬಾರಿ ಈ ದ್ರಾವಣವನ್ನು ರೋಗ ಹತೋಟಿಗಾಗಿ ಸಿಂಪಡಿಸಲಾಗುತ್ತದೆ. ಕಳೆದ ಬಾರಿಯೂ ಔಷಧಿ ಸಿಂಪಡಿಸಲು ಮಳೆ ಬಿಡುವು ನೀಡಿರಲಿಲ್ಲ. ಜೊತೆಗೆ ಕಳೆದ ಬೇಸಿಗೆಯಲ್ಲಿ ನೀರಿಲ್ಲದೆ ತೋಟಗಳು ಒಣಗಿದ್ದವು, ಸಹಜವಾಗಿ ಫಸಲೂ ಅರ್ಧಕ್ಕರ್ಧ ಕಡಿಮೆಯಾಗಿತ್ತು. ಈ ಬಾರಿ ಬೇಸಿಗೆಯಲ್ಲಿ ಮಳೆ ಬಂದುದರಿAದ ಉತ್ತಮ ಫಸಲು ನಿರೀಕ್ಷೆ ಇತ್ತು. ಆದರೆ ಕೊಳೆ ನಿಯಂತ್ರಣ ಸಾಧ್ಯವಾಗದಿದ್ದರೆ ಅಡಿಕೆ ಎಳತಾಗಿರುವಾಗಲೇ ಉದುರಿ ನಷ್ಟ ಸಂಭವಿಸುವ ಆತಂಕವನ್ನು ಕೃಷಿಕರು ಎದುರಿಸುತ್ತಿದ್ದಾರೆ. ಅಡಿಕೆಗೆ ಔಷಧಿ ಸಿಂಪಡಿಸಲು ನುರಿತ ಕಾರ್ಮಿಕರು ಅಗತ್ಯ, ಅವರ ಕೊರತೆಯೂ ಕೃಷಿಕರನ್ನು ಬಾಧಿಸುತ್ತಿದೆ. ಆಧುನಿಕ ಪರಿಹಾರಗಳು ಬಂದಿವೆಯಾದರೂ ಅವುಗಳು ಕಾರ್ಮಿಕರ ಕೊರತೆಗೆ ಪರಿಹಾರ ಹುಡುಕುವ ಮಾದರಿಗಳಾಗಿ ಅಭಿವೃದ್ಧಿ ಹೊಂದಿಲ್ಲ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…