ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಈ ಬಾರಿ ಕೊಳೆ ರೋಗ ಬಾಧೆ ತಡೆಯಲು ಔಷಧಿ ಸಿಂಪಡಿಸುವುದಕ್ಕೆ ಎಡೆಬಿಡದೆ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ.
ಈ ವರ್ಷ ಮುಂಗಾರು ಮಳೆ ನಿರೀಕ್ಷೆಗಿಂತ ಮೊದಲೇ ಆರಂಭವಾಗಿರುವುದರಿ0ದ ರೈತರಿಗೆ ಅಡಿಕೆ ಕೊಳೆರೋಗಕ್ಕೆ ಸಂಬ0ಧಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಅಡಿಕೆ ತೋಟಗಳನ್ನು ಹೊಂದಿರುವ ಕೃಷಿಕರು ಇದುವರೆಗೆ ಮೇ ತಿಂಗಳ ಕೊನೆಯಲ್ಲಿ ಮೊದಲ ಸುತ್ತಿನ ಔಷಧಿ ಸಿಂಪರಣೆಯನ್ನು ಮಾಡುತ್ತಿದ್ದರು. ಈ ಬಾರಿ ಮೇ ತಿಂಗಳ ಕೊನೆಯಲ್ಲಿ ಮಳೆಬಂದಿರುವುದರಿ0ದ ಔಷಧಿ ಸಿಂಪರಣೆ ಸಾಧ್ಯವಾಗಿಲ್ಲ. ಮಳೆಗಾಲದಲ್ಲಿ ಅಡಿಕೆ ಬೆಳೆಯನ್ನು ಶಿಲೀಂಧ್ರಗಳಿ0ದ ಹರಡುವ ಕೊಳೆ ರೋಗ ಭಾರೀ ಪ್ರಮಾಣದಲ್ಲಿ ನಾಶ ಮಾಡುತ್ತದೆ. ಇದಕ್ಕೆ ಪರಿಹಾರವಾಗಿ ಬೋರ್ಡೋ ದ್ರಾವಣವನ್ನು ಔಷಧಿಯಾಗಿ ಸಿಂಪಡಿಸಲಾಗುತ್ತದೆ.
ಮಳೆಗಾಲ ಆರಂಭಕ್ಕೆ ಮೊದಲೇ ಒಂದು ಬಾರಿ ಈ ದ್ರಾವಣ ಸಿಂಪರಿಸಿದರೆ ಬಳಿಕ 2-3 ಬಾರಿ ಈ ದ್ರಾವಣವನ್ನು ರೋಗ ಹತೋಟಿಗಾಗಿ ಸಿಂಪಡಿಸಲಾಗುತ್ತದೆ. ಕಳೆದ ಬಾರಿಯೂ ಔಷಧಿ ಸಿಂಪಡಿಸಲು ಮಳೆ ಬಿಡುವು ನೀಡಿರಲಿಲ್ಲ. ಜೊತೆಗೆ ಕಳೆದ ಬೇಸಿಗೆಯಲ್ಲಿ ನೀರಿಲ್ಲದೆ ತೋಟಗಳು ಒಣಗಿದ್ದವು, ಸಹಜವಾಗಿ ಫಸಲೂ ಅರ್ಧಕ್ಕರ್ಧ ಕಡಿಮೆಯಾಗಿತ್ತು. ಈ ಬಾರಿ ಬೇಸಿಗೆಯಲ್ಲಿ ಮಳೆ ಬಂದುದರಿAದ ಉತ್ತಮ ಫಸಲು ನಿರೀಕ್ಷೆ ಇತ್ತು. ಆದರೆ ಕೊಳೆ ನಿಯಂತ್ರಣ ಸಾಧ್ಯವಾಗದಿದ್ದರೆ ಅಡಿಕೆ ಎಳತಾಗಿರುವಾಗಲೇ ಉದುರಿ ನಷ್ಟ ಸಂಭವಿಸುವ ಆತಂಕವನ್ನು ಕೃಷಿಕರು ಎದುರಿಸುತ್ತಿದ್ದಾರೆ. ಅಡಿಕೆಗೆ ಔಷಧಿ ಸಿಂಪಡಿಸಲು ನುರಿತ ಕಾರ್ಮಿಕರು ಅಗತ್ಯ, ಅವರ ಕೊರತೆಯೂ ಕೃಷಿಕರನ್ನು ಬಾಧಿಸುತ್ತಿದೆ. ಆಧುನಿಕ ಪರಿಹಾರಗಳು ಬಂದಿವೆಯಾದರೂ ಅವುಗಳು ಕಾರ್ಮಿಕರ ಕೊರತೆಗೆ ಪರಿಹಾರ ಹುಡುಕುವ ಮಾದರಿಗಳಾಗಿ ಅಭಿವೃದ್ಧಿ ಹೊಂದಿಲ್ಲ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…