ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಈ ಬಾರಿ ಕೊಳೆ ರೋಗ ಬಾಧೆ ತಡೆಯಲು ಔಷಧಿ ಸಿಂಪಡಿಸುವುದಕ್ಕೆ ಎಡೆಬಿಡದೆ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ.
ಈ ವರ್ಷ ಮುಂಗಾರು ಮಳೆ ನಿರೀಕ್ಷೆಗಿಂತ ಮೊದಲೇ ಆರಂಭವಾಗಿರುವುದರಿ0ದ ರೈತರಿಗೆ ಅಡಿಕೆ ಕೊಳೆರೋಗಕ್ಕೆ ಸಂಬ0ಧಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಅಡಿಕೆ ತೋಟಗಳನ್ನು ಹೊಂದಿರುವ ಕೃಷಿಕರು ಇದುವರೆಗೆ ಮೇ ತಿಂಗಳ ಕೊನೆಯಲ್ಲಿ ಮೊದಲ ಸುತ್ತಿನ ಔಷಧಿ ಸಿಂಪರಣೆಯನ್ನು ಮಾಡುತ್ತಿದ್ದರು. ಈ ಬಾರಿ ಮೇ ತಿಂಗಳ ಕೊನೆಯಲ್ಲಿ ಮಳೆಬಂದಿರುವುದರಿ0ದ ಔಷಧಿ ಸಿಂಪರಣೆ ಸಾಧ್ಯವಾಗಿಲ್ಲ. ಮಳೆಗಾಲದಲ್ಲಿ ಅಡಿಕೆ ಬೆಳೆಯನ್ನು ಶಿಲೀಂಧ್ರಗಳಿ0ದ ಹರಡುವ ಕೊಳೆ ರೋಗ ಭಾರೀ ಪ್ರಮಾಣದಲ್ಲಿ ನಾಶ ಮಾಡುತ್ತದೆ. ಇದಕ್ಕೆ ಪರಿಹಾರವಾಗಿ ಬೋರ್ಡೋ ದ್ರಾವಣವನ್ನು ಔಷಧಿಯಾಗಿ ಸಿಂಪಡಿಸಲಾಗುತ್ತದೆ.
ಮಳೆಗಾಲ ಆರಂಭಕ್ಕೆ ಮೊದಲೇ ಒಂದು ಬಾರಿ ಈ ದ್ರಾವಣ ಸಿಂಪರಿಸಿದರೆ ಬಳಿಕ 2-3 ಬಾರಿ ಈ ದ್ರಾವಣವನ್ನು ರೋಗ ಹತೋಟಿಗಾಗಿ ಸಿಂಪಡಿಸಲಾಗುತ್ತದೆ. ಕಳೆದ ಬಾರಿಯೂ ಔಷಧಿ ಸಿಂಪಡಿಸಲು ಮಳೆ ಬಿಡುವು ನೀಡಿರಲಿಲ್ಲ. ಜೊತೆಗೆ ಕಳೆದ ಬೇಸಿಗೆಯಲ್ಲಿ ನೀರಿಲ್ಲದೆ ತೋಟಗಳು ಒಣಗಿದ್ದವು, ಸಹಜವಾಗಿ ಫಸಲೂ ಅರ್ಧಕ್ಕರ್ಧ ಕಡಿಮೆಯಾಗಿತ್ತು. ಈ ಬಾರಿ ಬೇಸಿಗೆಯಲ್ಲಿ ಮಳೆ ಬಂದುದರಿAದ ಉತ್ತಮ ಫಸಲು ನಿರೀಕ್ಷೆ ಇತ್ತು. ಆದರೆ ಕೊಳೆ ನಿಯಂತ್ರಣ ಸಾಧ್ಯವಾಗದಿದ್ದರೆ ಅಡಿಕೆ ಎಳತಾಗಿರುವಾಗಲೇ ಉದುರಿ ನಷ್ಟ ಸಂಭವಿಸುವ ಆತಂಕವನ್ನು ಕೃಷಿಕರು ಎದುರಿಸುತ್ತಿದ್ದಾರೆ. ಅಡಿಕೆಗೆ ಔಷಧಿ ಸಿಂಪಡಿಸಲು ನುರಿತ ಕಾರ್ಮಿಕರು ಅಗತ್ಯ, ಅವರ ಕೊರತೆಯೂ ಕೃಷಿಕರನ್ನು ಬಾಧಿಸುತ್ತಿದೆ. ಆಧುನಿಕ ಪರಿಹಾರಗಳು ಬಂದಿವೆಯಾದರೂ ಅವುಗಳು ಕಾರ್ಮಿಕರ ಕೊರತೆಗೆ ಪರಿಹಾರ ಹುಡುಕುವ ಮಾದರಿಗಳಾಗಿ ಅಭಿವೃದ್ಧಿ ಹೊಂದಿಲ್ಲ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…