ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಮತ್ತೆ ನೋಟೀಸ್ನ್ನ ಪೊಲೀಸ್ ಇಲಾಖೆ ಕೊಟ್ಟಿದೆ. ಎರಡನೇ ಬಾರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಪುತ್ತಿಲ ಅವರಿಗೆ ನೋಟೀಸ್ ನೀಡಿದ್ದಾರೆ.
ಪೆಹಲ್ಗಾಮ್ ಉಗ್ರ ದಾಳಿ ಖಂಡಿಸಿ ಪುತ್ತೂರಿನಲ್ಲಿ ಪ್ರತಿಭಟನೆ ಸಂದರ್ಭ ಪುತ್ತಿಲ ಭಾಷಣ ಮಾಡಿದ್ರು. ಇಸ್ಲಾಂ ಧರ್ಮವನ್ನ ಭಯೋತ್ಪಾದನೆಗೆ ಹೋಲಿಸಿ ಭಾಷಣ ಮಾಡಿದ ಹಿನ್ನಲೆ ಈ ಬಗ್ಗೆ ಪುತ್ತೂರು ನಗರ ಠಾಣೆಗೆ ಅಶ್ರಫ್ ದೂರನ್ನ ನೀಡಿದ್ರು. ಅದರಂತೆ ಇಂದು ಪುತ್ತಿಲರಿಗೆ ನೋಟೀಸ್ ನೀಡಿದ ಪೊಲೀಸರು, ನೋಟೀಸ್ ಸಿಕ್ಕಿದ ತಕ್ಷಣ ವಿಚಾರಣೆಗೆ ಹಾಜರಾಗಬೇಕೆಂದು ಉಲ್ಲೇಖಿಸಿದ್ದಾರೆ.
ನಿನ್ನೆಯಷ್ಟೇ ಗಡಿಪಾರು ನೋಟೀಸ್ ನೀಡಿದ್ದ ಪುತ್ತೂರು ನಗರ ಠಾಣಾ ಪೊಲೀಸರು, ಇದೀಗ ಮತ್ತೆ ಅರುಣ್ ಕುಮಾರ್ ಪುತ್ತಿಲರಿಗೆ ನೋಟೀಸ್ ಕೊಟ್ಟಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…
ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…