ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ.6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ನ ಸುಹಾಸ್ ಮರಿಕೆ, ವೇಣುಗೋಪಾಲ್ ಎಸ್.ಜೆ. ಹೇಳಿದ್ದಾರೆ.
ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಸುಮಾರು 70 ಮಳಿಗೆಗಳಿಗೆ ಮೇಳದಲ್ಲಿ ಅವಕಾಶ ನೀಡಲಾಗಿದೆ. ಈ ಬಾರಿ ವಿಶೇಷವಾಗಿ ಕೊನೆಯ ದಿನದಂದು ಸುಮಾರು 25 ಬಗೆಯ ಹಲಸಿನ ಹಣ್ಣು ಹಾಗೂ ಮಾವಿನ ಹಣ್ಣಿನ ಖಾದ್ಯಗಳನ್ನೊಳಗೊಂಡ ವಿಶೇಷ ಭೋಜನೆ ವ್ಯವಸ್ಥೆ ಮಾಡಲಾಗಿದ್ದು, 250 ಮಂದಿಗೆ ಸವಿಯುವ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಮರೆತ ಹಾಗೂ ಮರೆವಿನಂಚಿಲ್ಲಿರುವ ಪಾರಂಪರಿಕ ತಿಂಡಿಗಳನ್ನು ಸ್ಥಳದಲ್ಲೇ ತಯಾರಿಸುವ ಯೋಜನೆ ರೂಪಿಸಲಾಗಿದೆ. ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳಿಂದ ಗಿಡಗಳ ಪ್ರದರ್ಶನ ಮತ್ತು ಮಾರಾಟವಿದೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…
ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…
ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…
ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು…
ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…
ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…