ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಸೇರಿ ಒಟ್ಟು 36 ಜನರನ್ನು ಗಡಿಪಾರು ಮಾಡುವ ವಿಚಾರವಾಗಿ ಯುವಕನೊಬ್ಬ ಸೆಲ್ಫಿ ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಒಮ್ಮೆ ಪುತ್ತಿಲರ ವಿಷಯಕ್ಕೆ ಬಂದು ನೋಡಿ, ದಕ್ಷಿಣ ಕನ್ನಡದಲ್ಲಿ ಹಿಂದೂಗಳು ಸತ್ತಿದ್ದಾರ, ಬದುಕಿದ್ದಾರ ನೋಡೋಣ. ಹಿಂದೂ ಸಮಾಜ ಯಾವ ಅನ್ಯಾಯ ಮಾಡಿದೆ ಅಂತ ಗಡಿಪಾರು ಮಾಡುತ್ತಿದ್ದೀರಿ ಅದನ್ನು ಮೊದಲು ಹೇಳಿ ಆಮೇಲೆ ನೋಟೀಸ್ ಕೊಡಿ ಎಂದ ಯುವಕ. ನಿಮ್ಮ ತಾಕತ್ತನ್ನು ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುಗಲಭೆ ನಿಯಂತ್ರಿಸುವಲ್ಲಿ ಪ್ರದರ್ಶಿಸಿ. ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ, ನಾವು ಹಿಂದೂ ಕಾರ್ಯಕರ್ತರು, ಪ್ರತಿಕ್ಷಣ ಹಿಂದುತ್ವಕ್ಕೆ ದುಡಿಯುವವರು ಮುಂದೆಯೂ 24 ಗಂಟೆ ಹಿಂದುತ್ವಕ್ಕಾಗಿ ದುಡಿಯುತ್ತೇವೆ. ಅರುಣಣ್ಣನ ವಿಷಯಕ್ಕೆ ಬಂದ್ರೆ ಬಿಡುವವರು ನಾವಲ್ಲ ಎಂದು ಪೊಲೀಸ್ ಇಲಾಖೆ ಮತ್ತು ಸರಕಾರಕ್ಕೆ ಯುವಕ ವಿಡಿಯೋದ ಮೂಲಕ ಸವಾಲೆಸೆದಿದ್ದಾನೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…
ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…