ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಕಾರು ಚಾಲಕ ಸುಲೈಮಾನ್ ಕಲ್ಲಡ್ಕ ನಿಧನ

ಹಿರಿಯ ಕಾರು ಚಾಲಕ ಕಲ್ಲಡ್ಕ ನಿವಾಸಿ ಸುಲೈಮಾನ್ (93) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಸ್ಥಳೀಯ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಕಳೆದ 70 ವರ್ಷಗಳಿಂದ ಕಾರು ಚಾಲಕರಾಗಿ ದುಡಿದ ಶ್ರಮಜೀವಿಯಾಗಿದ್ದು, ಸ್ವಾತಂತ್ರ‍್ಯಾನ0ತರ ಪ್ರಥಮವಾಗಿ ವಾಹನ ಚಾಲನ ಪರವಾನಿಗೆ ಆರಂಭವಾದ 1955 ನೇ ಇಸವಿಯಲ್ಲಿ ಚಾಲನಾ ಪರವಾನಿಗೆ ಪಡೆದಿದ್ದರು. ಅಂದಿನ ಆ ದಿನಗಳಲ್ಲಿ ಕಲ್ಲಡ್ಕದಿಂದ ಮುಂಬಯಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಹೆಗ್ಗಳಿಕೆ ಇವರದ್ದು. ಕುರಾನ್ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ ಇವರು ಅರೆಬಿಕ್ ಮತ್ತು ಮಲಯಾಳಂ ಬಾಷಾ ಜ್ಞಾನವನ್ನು ಹೊಂದಿದ್ದರು. 70 ವರ್ಷಗಳ ತಮ್ಮ ಚಾಲಕ ಸೇವಾವಧಿಯಲ್ಲಿ ಕಲ್ಲಡ್ಕ ಮ್ಯೂಸಿಯಂ ನ ಕೆ.ಎಸ್.ಯಾಸಿರ್ ಸಹಿತ ನೂರಾರು ಮಂದಿಗೆ ವಾಹನ ಚಲಾಯಿಸಲು ಕಲಿಸಿಕೊಟ್ಟವರು. ಕಲ್ಲಡ್ಕದ ಹೆಸರಾಂತ ಕಾಂಗ್ರೆಸ್ ಮುಖಂಡ ದಿ. ಇಸ್ಮಾಯಿಲ್ ಕಲ್ಲಡ್ಕ, ಹೆಸರಾಂತ ಉದ್ಯಮಿ ದಿ.ಸೇಸಾರಿ ಶಾಫಿ ಹಾಜಿ (ಸೇಸರಾಜ್) ಅವರ ಸಹೋದರರಾಗಿರುವ ಸುಲೈಮಾನ್ ಅವರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!