ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಕಾರು ಚಾಲಕ ಸುಲೈಮಾನ್ ಕಲ್ಲಡ್ಕ ನಿಧನ

ಹಿರಿಯ ಕಾರು ಚಾಲಕ ಕಲ್ಲಡ್ಕ ನಿವಾಸಿ ಸುಲೈಮಾನ್ (93) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಸ್ಥಳೀಯ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಕಳೆದ 70 ವರ್ಷಗಳಿಂದ ಕಾರು ಚಾಲಕರಾಗಿ ದುಡಿದ ಶ್ರಮಜೀವಿಯಾಗಿದ್ದು, ಸ್ವಾತಂತ್ರ‍್ಯಾನ0ತರ ಪ್ರಥಮವಾಗಿ ವಾಹನ ಚಾಲನ ಪರವಾನಿಗೆ ಆರಂಭವಾದ 1955 ನೇ ಇಸವಿಯಲ್ಲಿ ಚಾಲನಾ ಪರವಾನಿಗೆ ಪಡೆದಿದ್ದರು. ಅಂದಿನ ಆ ದಿನಗಳಲ್ಲಿ ಕಲ್ಲಡ್ಕದಿಂದ ಮುಂಬಯಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಹೆಗ್ಗಳಿಕೆ ಇವರದ್ದು. ಕುರಾನ್ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ ಇವರು ಅರೆಬಿಕ್ ಮತ್ತು ಮಲಯಾಳಂ ಬಾಷಾ ಜ್ಞಾನವನ್ನು ಹೊಂದಿದ್ದರು. 70 ವರ್ಷಗಳ ತಮ್ಮ ಚಾಲಕ ಸೇವಾವಧಿಯಲ್ಲಿ ಕಲ್ಲಡ್ಕ ಮ್ಯೂಸಿಯಂ ನ ಕೆ.ಎಸ್.ಯಾಸಿರ್ ಸಹಿತ ನೂರಾರು ಮಂದಿಗೆ ವಾಹನ ಚಲಾಯಿಸಲು ಕಲಿಸಿಕೊಟ್ಟವರು. ಕಲ್ಲಡ್ಕದ ಹೆಸರಾಂತ ಕಾಂಗ್ರೆಸ್ ಮುಖಂಡ ದಿ. ಇಸ್ಮಾಯಿಲ್ ಕಲ್ಲಡ್ಕ, ಹೆಸರಾಂತ ಉದ್ಯಮಿ ದಿ.ಸೇಸಾರಿ ಶಾಫಿ ಹಾಜಿ (ಸೇಸರಾಜ್) ಅವರ ಸಹೋದರರಾಗಿರುವ ಸುಲೈಮಾನ್ ಅವರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!