ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಕಾರು ಚಾಲಕ ಸುಲೈಮಾನ್ ಕಲ್ಲಡ್ಕ ನಿಧನ

ಹಿರಿಯ ಕಾರು ಚಾಲಕ ಕಲ್ಲಡ್ಕ ನಿವಾಸಿ ಸುಲೈಮಾನ್ (93) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಸ್ಥಳೀಯ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಕಳೆದ 70 ವರ್ಷಗಳಿಂದ ಕಾರು ಚಾಲಕರಾಗಿ ದುಡಿದ ಶ್ರಮಜೀವಿಯಾಗಿದ್ದು, ಸ್ವಾತಂತ್ರ‍್ಯಾನ0ತರ ಪ್ರಥಮವಾಗಿ ವಾಹನ ಚಾಲನ ಪರವಾನಿಗೆ ಆರಂಭವಾದ 1955 ನೇ ಇಸವಿಯಲ್ಲಿ ಚಾಲನಾ ಪರವಾನಿಗೆ ಪಡೆದಿದ್ದರು. ಅಂದಿನ ಆ ದಿನಗಳಲ್ಲಿ ಕಲ್ಲಡ್ಕದಿಂದ ಮುಂಬಯಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಹೆಗ್ಗಳಿಕೆ ಇವರದ್ದು. ಕುರಾನ್ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ ಇವರು ಅರೆಬಿಕ್ ಮತ್ತು ಮಲಯಾಳಂ ಬಾಷಾ ಜ್ಞಾನವನ್ನು ಹೊಂದಿದ್ದರು. 70 ವರ್ಷಗಳ ತಮ್ಮ ಚಾಲಕ ಸೇವಾವಧಿಯಲ್ಲಿ ಕಲ್ಲಡ್ಕ ಮ್ಯೂಸಿಯಂ ನ ಕೆ.ಎಸ್.ಯಾಸಿರ್ ಸಹಿತ ನೂರಾರು ಮಂದಿಗೆ ವಾಹನ ಚಲಾಯಿಸಲು ಕಲಿಸಿಕೊಟ್ಟವರು. ಕಲ್ಲಡ್ಕದ ಹೆಸರಾಂತ ಕಾಂಗ್ರೆಸ್ ಮುಖಂಡ ದಿ. ಇಸ್ಮಾಯಿಲ್ ಕಲ್ಲಡ್ಕ, ಹೆಸರಾಂತ ಉದ್ಯಮಿ ದಿ.ಸೇಸಾರಿ ಶಾಫಿ ಹಾಜಿ (ಸೇಸರಾಜ್) ಅವರ ಸಹೋದರರಾಗಿರುವ ಸುಲೈಮಾನ್ ಅವರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!